News Karnataka Kannada
Sunday, April 28 2024
ಕೋಲಾರ

ನಾಳೆ ಬರ ಪೀಡಿತ ತಾಲೂಕು ಘೋಷಣೆಗಾಗಿ ಸಭೆ: ಕೃಷ್ಣಭೈರೇಗೌಡ

Meeting to announce drought-hit taluk tomorrow: Krishna byre Gowda
Photo Credit : News Kannada

ಕೋಲಾರ: ಬರ ಘೋಷಣೆ ಸಂಬಂಧ ಸೋಮವಾರ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಬರಪೀಡಿತ ತಾಲೂಕುಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬರಘೋಷಣೆಗೆ ಸಂಬಂಧಿಸಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಮಾನದಂಡ ನಿಗದಿ ಮಾಡಿದೆ. ಅದರ ಅನ್ವಯವೇ ಬರಪೀಡಿತ ತಾಲೂಕುಗಳ ಘೋಷಣೆ ಮಾಡಲಾಗುವುದು ಎಂದರು.

ಆ ಮಾನದಂಡ ಪ್ರಕಾರ ರಾಜ್ಯದ 113 ತಾಲೂಕುಗಳನ್ನು ಆಗಸ್ಟ್‌ 18ರಂದು ತಾತ್ಕಾಲಿಕ ಬರಪೀಡಿತ ಎಂದು ಪಟ್ಟಿ ಮಾಡಿಕೊಂಡಿದ್ದೇವೆ. ಜಿಲ್ಲೆಗಳಿಂದ ಬೆಳೆ ಸಮೀಕ್ಷೆ ವರದಿ ತರಿಸಿಕೊಂಡಿದ್ದೇವೆ. ಕನಿಷ್ಠ ಮೂರು ವಾರ ಶೇ. 60ಕ್ಕಿಂತ ಹೆಚ್ಚಿನ ಮಳೆ ಕೊರತೆ ಇರಬೇಕು ಯಾವ ತಾಲೂಕು ಅರ್ಹವಾಗುತ್ತದೆ ಎಂದು ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು. ಅವಶ್ಯವಿದ್ದಲ್ಲಿ ಸಚಿವ ಸಂಪುಟದ ಗಮನಕ್ಕೂ ತಂದು ಘೋಷಣೆ ಮಾಡಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು