ಕೋಲಾರ: ಬಂಗಾರಪೇಟೆ ತಾಲೂಕಿನ ಮೂತನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿರುವ ಮಲ್ಲೇಶ್ವರಸ್ವಾಮಿ ದೇವಾಲಯಕ್ಕೆ ಬಂದಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ನಡೆದಿದೆ.
ತಮಿಳುನಾಡು ಮೂಲದ ವೃದ್ಧ ಚಿಕ್ಕ ಬೀರಪ್ಪ (60) ಮೃತ ದುರ್ದೈವಿ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೂತನೂರು ಗ್ರಾಮದ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಮಲ್ಲೇಶ್ವರಸ್ವಾಮಿ ದೇವರ ದರ್ಶನ ಪಡೆಯಲೆಂದು ವೃದ್ಧ ಬಂದಿದ್ದರು. ಈ ವೇಳೆ ವೃದ್ಧನ ಮೇಲೆ ಆನೆ ದಾಳಿ ಮಾಡಿ ಬಲಿ ಪಡೆದುಕೊಂಡಿದೆ.
ಆನೆ ದಾಳಿಯಿಂದ ಮೃತದೇಹವೆಲ್ಲ ಮಾಂಸದ ಮುದ್ದೆಯಂತಾಗಿದೆ.