ಬೆಂಗಳೂರು: ಯುಗಾದಿ, ರಂಜಾನ್ ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು ಬೆಂಗಳೂರು ನಗರದಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಜನರಿಗೆ ಹೆಚ್ಚುವರಿ ಬಸ್ಗಳನ್ನು ರಸ್ತೆಗಿಳಿಸಲು ನಿಗಮ ಮುಂದಾಗಿದೆ.
ಒಟ್ಟು 2275 ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧಾರಿಸಿದ್ದು ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಕೆಂಪೇಗೌಡ ನಿಲ್ದಾಣ, ಸ್ಯಾಟ್ಲೈಟ್ ನಿಲ್ದಾಣ, ಶಾಂತಿನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ ಸೇರಿದಂತೆ ಹಲವು ಸ್ಥಳಗಳಿಗೆ ವಿಶೇಷ ಬಸ್ ಸೇವೆ ಮಾಡಲಾಗಿದೆ. ಅಲ್ಲದೇ ನೆರೆರಾಜ್ಯ ಹೈದರಾಬಾದ್, ಚೆನ್ನೈ, ಗೋವಾ ಪಣಜಿ, ಶಿರಡಿ, ಎರ್ನಾಕುಲಂಗೆ ವಿಶೇಷ ಬಸ್ ಸೇವೆ ಇರಲಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಎಸ್ಆರ್ಟಿಸಿಯಿಂದ 1,750ಬಸ್, ಎನ್ಡಬ್ಲ್ಯೂಕೆಎಸ್ಆರ್ಟಿಸಿಯ 145 ಬಸ್, ಕೆಕೆಆರ್ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.