News Karnataka Kannada
Sunday, April 28 2024
ಬೆಂಗಳೂರು

ಶಾಸಕಾಂಗ ಸಭೆ: ಸಭೆ ಬಹಿಷ್ಕರಿಸಿದ ಇಬ್ಬರು ಘಟಾನುಘಟಿ ಶಾಸಕರು

Legislative Assembly: Two prominent MLAs boycott meeting
Photo Credit : News Kannada

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಾಧಾನ ಸ್ಫೋಟಗೊಂಡಿದ್ದು, ಸಭೆಗೂ ಮುನ್ನವೇ ಇಬ್ಬರು ಶಾಸಕರು ಹೊರ ನಡೆದಿದ್ದಾರೆ.

ಹೌದು. ಹಿರಿಯ ನಾಯಕರ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಹೊರ ನಡೆದಿದ್ದಾರೆ. ಅಲ್ಲದೆ ಹೈಕಮಾಂಡ್ ನಿಲುವು ಸ್ಪಷ್ಟವಾಗುತ್ತಿದ್ದಂತೆಯೇ ಆಮೇಲೆ ಮಾತಾಡ್ತೀವಿ  ಎಂದು ಹೊರ ನಡೆದ ಯತ್ನಾಳ್‍ಗೆ ರಮೇಶ್ ಜಾರಕಿಹೊಳಿಯೂ ಸಾಥ್ ನೀಡಿದರು.

ಇದಕ್ಕೂ ಮುನ್ನ ಹೈಕಮಾಂಡ್ ಸಂದೇಶ ಹೊತ್ತು ತಂದ ವೀಕ್ಷಕರ ಎದುರೇ ಶಾಸಕ ಯತ್ನಾಳ್ ಮೌನ ಮುರಿದಿದ್ದರು. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕಕ್ಕೆ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಬಿಜೆಪಿ ಒಂದೇ ಕುಟುಂಬಕ್ಕೆ ಸೀಮಿತವಾಗಬಾರದು. ಬ್ಲಾಕ್‍ಮೇಲ್ ತಂತ್ರಗಳಿಗೆ ಹೈಕಮಾಂಡ್ ಮಣಿಯಬಾರದು. ಕೆಲವೇ ಚೇಲಗಳ ಮಾತು ಕೇಳಿ ಕೇಂದ್ರ ನಾಯಕರು ತೀರ್ಮಾನ ಮಾಡಬಾರದು. ನಾನು ಯಾವುದೇ ಕಾರಣಕ್ಕೂ ಕಾಂಪ್ರಮೈಸ್ ಆಗಲ್ಲ. ನನ್ನ ಖರೀದಿ ಮಾಡಲಾಗಲ್ಲ. ಪ್ರತಿಪಕ್ಷದ ನಾಯಕ ಸ್ಥಾನ ಉತ್ತರ ಕರ್ನಾಟಕದವರಿಗೆ ಕೊಡಬೇಕು. ಉತ್ತರ ಕರ್ನಾಟಕಕ್ಕೆ ವಿಪಕ್ಷ ಸ್ಥಾನ ನೀಡದಿದ್ದರೆ ಜನ ತೀರ್ಮಾನಿಸುತ್ತಾರೆ ಎಂದು ಗುಡುಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು