ಬೆಂಗಳೂರು: ಬೆಂಗಳೂರಿನ ಜಾಲಹಳ್ಳಿಯ ಕದಂಬ ಹೋಟೆಲ್ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಪತ್ರ ಕಳುಹಿಸಿರುವ ಘಟನೆ ನಡೆದಿದೆ.
ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಹೊಟೇಲ್ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಅಪರಿಚಿತರು ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಇಂದು ಮಧ್ಯಾಹ್ನ 11.45ಕ್ಕೆ ಕದಂಬ ಹೋಟೆಲ್ನಲ್ಲಿ ಬಾಂಬ್ ಇಟ್ಟಿರೋದಾಗಿ ಪೋಸ್ಟ್ ಮೂಲಕ ಬೆದರಿಕೆ ಪತ್ರ ಹಾಕಲಾಗಿದೆ. ಈ ಸುದ್ದಿ ತಿಳಿದ ಕೂಡಲೇ ಕದಂಬ ಗಾರ್ಡೇನಿಯಾ ಹೋಟೆಲ್ಗೆ ಜಾಲಹಳ್ಳಿ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಹೊಟೇಲ್ನಲ್ಲಿದ್ದ ಸಿಬ್ಬಂದಿ, ಗ್ರಾಹಕರನ್ನೆಲ್ಲಾ ಪೊಲೀಸರು ಹೊರಗೆ ಕಳುಹಿಸಿದ್ದಾರೆ. ಕದಂಬ ಹೋಟೆಲ್ ಬಳಿಯೇ ಜಾಲಹಳ್ಳಿ ಪೊಲೀಸರು ಸೆರಿದ್ದಾರೆ.
ಬಾಂಬ್ ಬೆದರಿಕೆ ಪತ್ರ ಬರೆದಿರುವ ಅನಾಮಿಕ ಪೊಲೀಸರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಹೊಟೇಲ್ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾನೆ. ಹೋಟೆಲ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.