News Karnataka Kannada
Monday, May 20 2024
ಬೆಂಗಳೂರು

ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದ ಪಿಎಸ್​ಐ ಅಭ್ಯರ್ಥಿಗಳಿಂದ ರಾಜ್ಯ ಸರ್ಕಾರಕ್ಕೆ ಪತ್ರ

Photo Credit : News Kannada

ಬೆಂಗಳೂರು: ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಾಲಾಗಿದೆ. ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಹೀಗಾಗಿ 545 ನೇಮಕಾತಿಯಲ್ಲಿ ಆಯ್ಕೆಯಾದ 490 ಅಭ್ಯರ್ಥಿಗಳನ್ನು ನ್ಯಾಯಾಂಗ ತನಿಖಾ ವ್ಯಾಪ್ತಿಗೆ ತರಲು ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಇದಾಗಿದೆ. ಅಕ್ಟೋಬರ್ 3, 2021 ರಲ್ಲಿ 545 ಪರೀಕ್ಷೆ ನಡೆಸಲಾಗಿತ್ತು. ಆದರೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಅಭ್ಯರ್ಥಿಗಳು ಆರೋಪ ಮಾಡಿ ದೂರನ್ನು ನೀಡಿದ್ದರು. ಪಿಎಸ್‌ಐ ಪರೀಕ್ಷೆಯಲ್ಲಿ 21 ಪ್ರಶ್ನೆಗಳಿಗೆ ಉತ್ತರಿಸಿದ ಅಭ್ಯರ್ಥಿ 100 ಅಂಕಗಳನ್ನು ಪಡೆದಿದ್ದರು. ಖಾಲಿ ಒಎಂಆರ್ ಶೀಟ್‌ಗಳನ್ನು ನಂತರ ಭರ್ತಿ ಮಾಡಲಾಗಿದೆ ಎಂಬ ಆರೋಪವೂ ಇದೆ.

ಉತ್ತರ ಕರ್ನಾಟಕದ ಭಾಗದ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಇಲ್ಲದೆ ಇದ್ದಿದ್ದು, ಬ್ಲೂಟೂಥ್ ಬಳಸಿಕೊಂಡು ಪರೀಕ್ಷೆಯನ್ನು ಬರೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಎಲ್ಲ ಹಿನ್ನೆಲೆಯಲ್ಲಿ ಪ್ರಕರಣದ ಸ್ವರೂಪ ತೀವ್ರಗೊಂಡ ಬಳಿಕ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುಗರಿ ಜಿಲ್ಲೆಯ ಬಿಜೆಪಿ ನಾಯಕಿಯ ಹೆಸರು ತಳುಕು ಹಾಕಿಕೊಂಡಿದೆ. ಜಿಲ್ಲೆಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಸ್ಥೆ ಹಾಗೂ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮನೆಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸುತ್ತಾರೆ. ಈ ನಡುವೆ ಬಿಜೆಪಿ ನಾಯಕಿ ಹಾಗೂ ಪ್ರಕರಣದ ಆರೋಪಿ ದಿವ್ಯಾ ಹಾಗೂ ಆಕೆಯ ಕುಟುಂಬಸ್ಥರ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇರುವು ಫೋಟೋ ವೈರಲ್ ಆಗಿತ್ತು.

ಇನ್ನು ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ ಸಂಬಂಧ ಬಂಧಿತ ನೇಮಕಾತಿ ವಿಭಾಗದ ಮಾಜಿ ಮುಖ್ಯಸ್ಥ ಹಾಗೂ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪಾಲ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕ್ರಮ ಜರುಗಿಸಲು ರಾಜ್ಯ ಅಪರಾಧ ತನಿಖಾ ದಳಕ್ಕೆ (ಸಿಐಡಿ) ಕೇಂದ್ರ ಸರ್ಕಾರ ಈಗಾಗಲೇ ಅನುಮತಿ ನೀಡಿದೆ.

ನೇಮಕಾತಿ ವಿಭಾಗ ಮುಖ್ಯಸ್ಥರಾಗಿ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿಯನ್ನು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಅಮೃತ್‌ ಪಾಲ್‌ ಅವರು ನಡೆಸಬೇಕಿತ್ತು. ಆದರೆ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೆಲ ಅಭ್ಯರ್ಥಿಗಳಿಂದ ಹಣ ಪಡೆದು ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಲು ನೆರವಾಗಿ ಭ್ರಷ್ಟಾಚಾರ ನಡೆಸಿದ್ದಾರೆ. ಹೀಗಾಗಿ ಅಖಿಲ ಭಾರತ ಸೇವಾ ಅಧಿಕಾರಿಯಾಗಿರುವ ಅಮೃತ್‌ ಪಾಲ್‌ ವಿರುದ್ಧ ಭ್ರಷಾಚಾರ ನಿಗ್ರಹ ಕಾಯ್ದೆಯನ್ನು ದಾಖಲಿಸಲು ಪ್ರಾಸಿಕ್ಯೂಷನ್‌ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಸಿಐಡಿ ಮನವಿ ಮಾಡಿತ್ತು.

ಈ ಮನವಿ ಪುರಸ್ಕರಿಸಿದ ಕೇಂದ್ರ ಸರ್ಕಾರವು, ಎಡಿಜಿಪಿ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ. ಸರ್ಕಾರದ ಆದೇಶ ಕೈಸೇರಿದ ಬಳಿಕ ನ್ಯಾಯಾಲಯಕ್ಕೆ ಎಡಿಜಿಪಿ ವಿರುದ್ಧ ಪಿಸಿ ಕಾಯ್ದೆ ಅಳವಡಿಕೆಗೆ ಕೋರಿಕೆ ಸಲ್ಲಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಹಗರಣದಲ್ಲಿ ಬಂಧಿತರಾಗಿರುವ ಅಮೃತ್‌ ಪಾಲ್‌ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಮೊದಲು ವಂಚನೆ, ದಾಖಲೆ ತಿದ್ದಿದ ಹಾಗೂ ಅಧಿಕಾರ ದುರ್ಬಳಕೆ ಹೀಗೆ ವಿವಿಧ ಆರೋಪಗಳಡಿ ತನಿಖೆ ನಡೆಸಿ ಎಡಿಜಿಪಿ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಆರೋಪ ಪಟ್ಟಿ ಸಲ್ಲಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು