ಬೆಂಗಳೂರು: ಮೀನುಗಾರ ಮಹಿಳೆಯರ ಸಾಲದ ಮಿತಿಯನ್ನು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದಿರಾ ಕ್ಯಾಂಟೀನ್ ಗೆ ನೂರು ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.
ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಕಲಬುರಗಿಯಲ್ಲಿ ತಾಯಿ ಮತ್ತು ಮಗು ಆಸ್ಪತ್ರೆಗೆ ಸ್ಥಾಪನೆ ಮಾಡಲಾಗುವುದು ಎಂದು ವಿವರಿಸಿದರು. ಎಪಿಎಂಸಿ ಕಾಯ್ದೆ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.