ಬೆಂಗಳೂರು: ಲೋಕಾಯುಕ್ತ ಪೊಲೀಸರು ಮತ್ತೊಮ್ಮೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಇಂದು ಸಂಜೆ ದಾಳಿ ನಡೆಸಿದ್ದಾರೆ.
ಪದ್ಮನಾಭನಗರ, ಜಯನಗರ, ವಿಜಯನಗರ, ಬಸವನಗುಡಿ, ಬ್ಯಾಟರಾಯನಪುರ, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ ಕೆ.ಆರ್.ಪುರಂ ಸೇರಿದಂತೆ ಒಟ್ಟು 45 ಆರ್ಒ, ಎಆರ್ಒ, ಎಡಿಟಿಪಿ ಅಧಿಕಾರಿಗಳ ಕಚೇರಿಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ, ತಪಾಸಣೆ ನಡೆಸುತ್ತಿದ್ದಾರೆ.
ಖುದ್ದು ಅಖಾಡಕ್ಕಿಳಿದ ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್, ರಾಜಾಜಿನಗರದ ಕಂದಾಯ ಕಚೇರಿಯಲ್ಲಿ ಅಧಿಕಾರಿ ಹೆಚ್ ಭಾರತಿ ಅವರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳಿದ್ದಾರೆ. ಅಲ್ಲದೆ, ಅರ್ಜಿದಾರರಿಗೆ ಕರೆ ಮಾಡಿ ತಾವು ಸಲ್ಲಿಸಿರುವ ಅರ್ಜಿಗಳಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿದ್ದಾರಾ? ಲಂಚ ಕೇಳಿದ್ದಾರಾ ಎಂಬಿತ್ಯಾದಿ ಮಾಹಿತಿ ಪಡೆಯುತ್ತಿದ್ದಾರೆ.
ಕ್ಯಾಶ್ ರಿಜಿಸ್ಟ್ರೇಷನ್ ಬಗ್ಗೆ ಆರ್ಒ ಕಚೇರಿಯಲ್ಲಿ ಲೋಕಾಯುಕ್ತರು ಪ್ರಶ್ನೆ ಕೇಳಿದಾರೆ. ಈ ವೇಳೆ ಯಾವುದೇ ದಾಖಲೆ ಒದಗಿಸದಿದ್ದಕ್ಕೆ ಲೋಕಾಯುಕ್ತರು ಗರಂ ಆಗಿದ್ದಾರೆ. ಕ್ಯಾಶ್ ಡಿಕ್ಲರೇಷನ್ ಬುಕ್ ಬಗ್ಗೆ ಕೇಳಿದ ಹೆಚ್ ಭಾರತಿ ಕಕ್ಕಾಬಿಕ್ಕಿಯಾಗಿದ್ದಾರೆ. ಅಲ್ಲದೆ, ಬುಕ್ ಇಡುವಂತೆ ನಾನು ಈಗಾಗಲೇ ಹೇಳಿದ್ದೀನಿ ಅಂತ ಹೇಳಿ ಜಾರಿಕೊಂಡಿದ್ದಾರೆ.