News Karnataka Kannada
Saturday, April 27 2024
ಬೆಂಗಳೂರು

ಚಂದ್ರ ಗ್ರಹಣ: ರಾಜ್ಯದ ಬಹುತೇಕ ದೇವಳಗಳು ಬಂದ್‌

Lunar eclipse: Most of the temples in the state are closed
Photo Credit : News Kannada

ಬೆಂಗಳೂರು: ಇಂದು ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ದೇಶದ ಎಲ್ಲಾ ಸ್ಥಳಗಳಲ್ಲಿ ಈ ರಾಹುಗ್ರಸ್ತ ಚಂದ್ರಗ್ರಹಣ ಗೋಚರಿಸಲಿದೆ. ಇನ್ನು ಗ್ರಹಣ ಹಿನ್ನಲೆ ರಾಜ್ಯದ ಪ್ರಮುಖ ದೇವಸ್ಥಾಗಳು ಬಂದ್​ ಆಗಿದೆ.

ಕದ್ರಿ ಶ್ರೀ ಮಂಜುನಾಥ ದೇವರಿಗೆ ಅವಧಿಗೆ ಮೊದಲು ಮಹಾಪೂಜೆ ನಡೆದಿದ್ದು, ಪ್ರತೀ ನಿತ್ಯ ರಾತ್ರಿ 8 ಗಂಟೆಗೆ ನೆರವೇರುತ್ತಿದ್ದ ಮಹಾಪೂಜೆ, ಇಂದು 7 ರಿಂದ 7.30ರ ಅವಧಿಯಲ್ಲಿ ಮುಕ್ತಾಯವಾಗಿದೆ. ಮಹಾಪೂಜೆ ಮುಗಿದ ಬೆನ್ನಲ್ಲೇ ದೇವರ ದರ್ಶನ ಕೂಡ ಬಂದ್ ಮಾಡಲಾಗಿದ್ದು, ದೇವಸ್ಥಾನದ ಹೊರ ಆವರಣದಲ್ಲಿ ಮಾತ್ರ ಪ್ರದಕ್ಷಿಣೆಗೆ ಬರಲು ಅವಕಾಶ ಕಲ್ಪಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕೂಡ ಬಂದ್ ಮಾಡಲಾಗಿದೆ. ರಾತ್ರಿಯ ಮಹಾಪೂಜೆಯನ್ನು ಬೇಗ ಮಾಡಿ ಬಂದ್ ಮಾಡಲಾಗಿದ್ದು, ನಾಳೆ ಬೆಳಿಗ್ಗೆವರೆಗೂ ದೇವರ ದರ್ಶನಕ್ಕೆ ನಿರ್ಬಂಧಿಸಲಾಗಿದೆ. ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ ಸೇವೆಯೂ ಬಂದ್ ಮಾಡಲಾಗಿದೆ.
ಚಂದ್ರಗ್ರಹಣ ಹಿನ್ನೆಲೆ ಮಂಡ್ಯದ ಪುರಾಣ ಪ್ರಸಿದ್ಧ ದೇವಸ್ಥಾನಗಳು ಬಂದ್​​ ಆಗಿವೆ, ಮೇಲುಕೋಟೆ ಚೆಲುವನಾರಾಯಣಸ್ವಾಮಿ, ನಿಮಿಷಾಂಬ ದೇವಿ, ಶ್ರೀರಂಗಪಟ್ಟಣದ ರಂಗನಾಥ, ಲಕ್ಷ್ಮೀಜನಾರ್ದನ ದೇವಸ್ಥಾನ ಸೇರಿ ಜಿಲ್ಲೆಯ ಹಲವು ದೇವಸ್ಥಾನಗಳ ಬಾಗಿಲು ಮುಚ್ಚಲಾಗಿದೆ.​ ನಾಳೆ ಬೆಳಗ್ಗೆ ಎಂದಿನಂತೆ ದೇಗುಲ ಶುದ್ಧೀಕರಣ ಮಾಡಿ ಪೂಜೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು