ಚಂದ್ರ ಗ್ರಹಣ: ರಾಜ್ಯದ ಬಹುತೇಕ ದೇವಳಗಳು ಬಂದ್‌

ಬೆಂಗಳೂರು: ಇಂದು ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ದೇಶದ ಎಲ್ಲಾ ಸ್ಥಳಗಳಲ್ಲಿ ಈ ರಾಹುಗ್ರಸ್ತ ಚಂದ್ರಗ್ರಹಣ ಗೋಚರಿಸಲಿದೆ. ಇನ್ನು ಗ್ರಹಣ ಹಿನ್ನಲೆ ರಾಜ್ಯದ ಪ್ರಮುಖ ದೇವಸ್ಥಾಗಳು ಬಂದ್​ ಆಗಿದೆ.

ಕದ್ರಿ ಶ್ರೀ ಮಂಜುನಾಥ ದೇವರಿಗೆ ಅವಧಿಗೆ ಮೊದಲು ಮಹಾಪೂಜೆ ನಡೆದಿದ್ದು, ಪ್ರತೀ ನಿತ್ಯ ರಾತ್ರಿ 8 ಗಂಟೆಗೆ ನೆರವೇರುತ್ತಿದ್ದ ಮಹಾಪೂಜೆ, ಇಂದು 7 ರಿಂದ 7.30ರ ಅವಧಿಯಲ್ಲಿ ಮುಕ್ತಾಯವಾಗಿದೆ. ಮಹಾಪೂಜೆ ಮುಗಿದ ಬೆನ್ನಲ್ಲೇ ದೇವರ ದರ್ಶನ ಕೂಡ ಬಂದ್ ಮಾಡಲಾಗಿದ್ದು, ದೇವಸ್ಥಾನದ ಹೊರ ಆವರಣದಲ್ಲಿ ಮಾತ್ರ ಪ್ರದಕ್ಷಿಣೆಗೆ ಬರಲು ಅವಕಾಶ ಕಲ್ಪಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕೂಡ ಬಂದ್ ಮಾಡಲಾಗಿದೆ. ರಾತ್ರಿಯ ಮಹಾಪೂಜೆಯನ್ನು ಬೇಗ ಮಾಡಿ ಬಂದ್ ಮಾಡಲಾಗಿದ್ದು, ನಾಳೆ ಬೆಳಿಗ್ಗೆವರೆಗೂ ದೇವರ ದರ್ಶನಕ್ಕೆ ನಿರ್ಬಂಧಿಸಲಾಗಿದೆ. ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ ಸೇವೆಯೂ ಬಂದ್ ಮಾಡಲಾಗಿದೆ.
ಚಂದ್ರಗ್ರಹಣ ಹಿನ್ನೆಲೆ ಮಂಡ್ಯದ ಪುರಾಣ ಪ್ರಸಿದ್ಧ ದೇವಸ್ಥಾನಗಳು ಬಂದ್​​ ಆಗಿವೆ, ಮೇಲುಕೋಟೆ ಚೆಲುವನಾರಾಯಣಸ್ವಾಮಿ, ನಿಮಿಷಾಂಬ ದೇವಿ, ಶ್ರೀರಂಗಪಟ್ಟಣದ ರಂಗನಾಥ, ಲಕ್ಷ್ಮೀಜನಾರ್ದನ ದೇವಸ್ಥಾನ ಸೇರಿ ಜಿಲ್ಲೆಯ ಹಲವು ದೇವಸ್ಥಾನಗಳ ಬಾಗಿಲು ಮುಚ್ಚಲಾಗಿದೆ.​ ನಾಳೆ ಬೆಳಗ್ಗೆ ಎಂದಿನಂತೆ ದೇಗುಲ ಶುದ್ಧೀಕರಣ ಮಾಡಿ ಪೂಜೆ ನಡೆಯಲಿದೆ.

Umesha HS

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago