ಲಕ್ಷದ್ವೀಪವನ್ನು ಲೇವಡಿ ಮಾಡಿದ ಮಾಲ್ಡೀವ್ಸ್​ ಸಚಿವ: ಭಾರತೀಯರ ತಿರುಗೇಟು

ಬೆಂಗಳೂರು: ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿ ಕುರಿತು ಲೇವಡಿ ಮಾಡಿದ್ದ ಮಾಲ್ಡೀವ್ಸ್​ ಸಚಿವರಿಗೆ ಭಾರತೀಯರು ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳ ನಡುವಿನ ಹೋಲಿಕೆಗಳು ಪ್ರಾರಂಭವಾಗಿದ್ದವು.

ಮಾಲ್ಡೀವ್ಸ್​ ಸಚಿವ ಅಬ್ದುಲ್ಲಾ ಮೊಹ್ಜುಮ್ ಮಜೀಸ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಮಾಲ್ಡೀವ್ಸ್​ ಹಾಗೂ ಭಾರತದ ಪ್ರವಾಸೋದ್ಯಮಕ್ಕೆ ಹೋಲಿಕೆ ಮಾಡಿದ್ದಾರೆ, ಭಾರತಕ್ಕಿಂತ ಅಲ್ಲಿ ರೆಸಾರ್ಟ್​ನಿಂದ ಹಿಡಿದು ಎಲ್ಲಾ ಮೂಲಸೌಕರ್ಯಗಳು ಹೆಚ್ಚು ಎಂದು ಬರೆದುಕೊಂಡಿದ್ದರೆ. ಮತ್ತೊಬ್ಬ ನಾಯಕ ಜಾಹಿದ್ ರಮೀಜ್ ಪೋಸ್ಟ್​ ಮಾಡಿದ್ದು, ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸುವ ಬಗ್ಗೆ ಮಾತನಾಡಿದ್ದು, ಖಂಡಿತವಾಗಿಯೂ ಮೋದಿಯವರದ್ದು ಉತ್ತಮ ಹೆಜ್ಜೆ, ಆದರೆ ನಮ್ಮೊಂದಿಗೆ ಸ್ಪರ್ಧಿಸುವುದು ಭ್ರಮೆ. ನಮ್ಮಂತಹ ಸೇವೆಯನ್ನು ಒದಗಿಸುವುದು ಸಾಧ್ಯವೇ ಎಂದು ಬರೆದಿದ್ದಾರೆ.

ಇಂತಹ ಹೇಳಿಕೆಯಿಂದಾಗಿ ಇದೀಗ ಎಕ್ಸ್​ನಲ್ಲಿ #Boycott Maldives ಅಭಿಯಾನ ಶುರುವಾಗಿದೆ.

ಪ್ರವಾಸೋದ್ಯಮವನ್ನು ಅವಲಂಬಿಸಿರುವ ಮಾಲ್ಡೀವ್ಸ್‌ಗೆ ಭಾರತದ ಶಕ್ತಿಯ ಬಗ್ಗೆ ತಿಳಿದಿಲ್ಲ ಎಂದು ಭಾರತೀಯರು ಹೇಳುತ್ತಿದ್ದಾರೆ. ಮಾಲ್ಡೀವ್ಸ್ ಪ್ರವಾಸವನ್ನು ರದ್ದುಗೊಳಿಸಿದ ನಂತರ ಲಕ್ಷದ್ವೀಪಕ್ಕೆ ಆದ್ಯತೆ ನೀಡುವವರು ಅನೇಕರಿದ್ದಾರೆ.

Ashika S

Recent Posts

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

4 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago