ಬೆಂಗಳೂರು: ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿ ಕುರಿತು ಲೇವಡಿ ಮಾಡಿದ್ದ ಮಾಲ್ಡೀವ್ಸ್ ಸಚಿವರಿಗೆ ಭಾರತೀಯರು ತಿರುಗೇಟು ನೀಡಿದ್ದಾರೆ.
ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳ ನಡುವಿನ ಹೋಲಿಕೆಗಳು ಪ್ರಾರಂಭವಾಗಿದ್ದವು.
ಮಾಲ್ಡೀವ್ಸ್ ಸಚಿವ ಅಬ್ದುಲ್ಲಾ ಮೊಹ್ಜುಮ್ ಮಜೀಸ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಮಾಲ್ಡೀವ್ಸ್ ಹಾಗೂ ಭಾರತದ ಪ್ರವಾಸೋದ್ಯಮಕ್ಕೆ ಹೋಲಿಕೆ ಮಾಡಿದ್ದಾರೆ, ಭಾರತಕ್ಕಿಂತ ಅಲ್ಲಿ ರೆಸಾರ್ಟ್ನಿಂದ ಹಿಡಿದು ಎಲ್ಲಾ ಮೂಲಸೌಕರ್ಯಗಳು ಹೆಚ್ಚು ಎಂದು ಬರೆದುಕೊಂಡಿದ್ದರೆ. ಮತ್ತೊಬ್ಬ ನಾಯಕ ಜಾಹಿದ್ ರಮೀಜ್ ಪೋಸ್ಟ್ ಮಾಡಿದ್ದು, ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸುವ ಬಗ್ಗೆ ಮಾತನಾಡಿದ್ದು, ಖಂಡಿತವಾಗಿಯೂ ಮೋದಿಯವರದ್ದು ಉತ್ತಮ ಹೆಜ್ಜೆ, ಆದರೆ ನಮ್ಮೊಂದಿಗೆ ಸ್ಪರ್ಧಿಸುವುದು ಭ್ರಮೆ. ನಮ್ಮಂತಹ ಸೇವೆಯನ್ನು ಒದಗಿಸುವುದು ಸಾಧ್ಯವೇ ಎಂದು ಬರೆದಿದ್ದಾರೆ.
ಇಂತಹ ಹೇಳಿಕೆಯಿಂದಾಗಿ ಇದೀಗ ಎಕ್ಸ್ನಲ್ಲಿ #Boycott Maldives ಅಭಿಯಾನ ಶುರುವಾಗಿದೆ.
ಪ್ರವಾಸೋದ್ಯಮವನ್ನು ಅವಲಂಬಿಸಿರುವ ಮಾಲ್ಡೀವ್ಸ್ಗೆ ಭಾರತದ ಶಕ್ತಿಯ ಬಗ್ಗೆ ತಿಳಿದಿಲ್ಲ ಎಂದು ಭಾರತೀಯರು ಹೇಳುತ್ತಿದ್ದಾರೆ. ಮಾಲ್ಡೀವ್ಸ್ ಪ್ರವಾಸವನ್ನು ರದ್ದುಗೊಳಿಸಿದ ನಂತರ ಲಕ್ಷದ್ವೀಪಕ್ಕೆ ಆದ್ಯತೆ ನೀಡುವವರು ಅನೇಕರಿದ್ದಾರೆ.
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…