News Karnataka Kannada
Tuesday, April 30 2024
ಬೆಂಗಳೂರು

ಇಂದು ಕನ್ನಡಿಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನ

mallikarjun kharge
Photo Credit : News Kannada

ಬೆಂಗಳೂರು: ಕನ್ನಡಿಗ, ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು (ಜುಲೈ 21) 81ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಖರ್ಗೆ ಜನ್ಮದಿನಕ್ಕೆ ಕಾಂಗ್ರೆಸ್, ಬಿಜೆಪಿ ಹಲವು ನಾಯಕರು ಶುಭಕೋರುತ್ತಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವರವಟ್ಟಿ ಎನ್ನುವ ಗ್ರಾಮದಲ್ಲಿ ಜುಲೈ 21, 1942ರಲ್ಲಿ ಜನಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೀಗ ಎಂಬತ್ತು ವರ್ಷ.

1972 ರಲ್ಲಿ ಅನಿರೀಕ್ಷಿತವಾಗಿ ಅಂದಿನ ಕಲಬುರಗಿ ಜಿಲ್ಲೆಯ ಗುರಮಠಕಲ್ ಎಸ್ಸಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ಪ್ರಯತ್ನದಲ್ಲಿಯೇ ಶಾಸಕರಾಗಿ ಆಯ್ಕೆಯಾಗಿದ್ದರು. 2008 ರಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಿಂದ ಸ್ಪರ್ಧಿಸಿ 9 ನೇ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದರು.

2014 ರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಸರ್ಕಾರದ ವಿರುದ್ದ ತಮ್ಮ ಮೊನಚಾದ ಮಾತುಗಳಿಂದ ತಿವಿದು, ಪ್ರತಿಪಕ್ಷದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದ್ದರು. ಇದೇ ಕಾರಣಕ್ಕೆ ಸೋನಿಯಾ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿಸಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ನೀಡಿದ್ದರು. ಇದೀಗ ಅವರು ಎಐಸಿಸಿ ಅಧ್ಯಕ್ಷ ಸ್ಥಾನವಹಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ.

‘ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಸುದೀರ್ಘ ಆರೋಗ್ಯ ಕೊಟ್ಟು ಕಾಪಾಡಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೂಡ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ‘ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಶ್ರಮ ಹಾಗೂ ಬದ್ಧತೆಯು ಎಂದಿಗೂ ನಮಗೆ ಸ್ಫೂರ್ತಿದಾಯಕವಾಗಿದೆ. ಉತ್ತಮ ಆರೋಗ್ಯ, ಪ್ರೀತಿ ತುಂಬಿದ ಜೀವನ ನಿಮ್ಮದಾಗಿರಲಿ ಎಂಬುದಾಗಿ ಆಶಿಸುತ್ತೇನೆ’ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ಶುಭಾಶಯ ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು