ಬೆಂಗಳೂರು: ಎಣ್ಣೆ ಕೊಡಿಸಲಿಲ್ಲ ಎಂದು ಹಿರಿಯ ನಾಗರೀಕನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಆರೋಪಿ ಧರ್ಮ ತಲೆಮರೆಸಿಕೊಂಡಿದ್ದಾನೆ.
ಗಿರಿನಗರದ ಮೂಕಾಂಭಿಕನಗರದಲ್ಲಿ ಸಿಂಗಾರ ವೇಲು ಎಂಬುವವರು ತಮ್ಮ ಮನೆಯ ಬಳಿ ಕಬಾಬ್ ತಿನ್ನುತ್ತಿದ್ದರು. ಈ ವೇಳೆ ಆರೋಪಿ ಧರ್ಮ ಬಂದು ತನಗೆ ನೈಂಟಿ ಎಣ್ಣೆ ಕೊಡಿಸು ಅಂತ ಹೇಳಿದ್ದಾನೆ. ಕೊಡಿಸದಿದ್ದಾಗ ಕುಪಿತಗೊಂಡ ಧರ್ಮ, ಸಿಂಗಾರ ವೇಲು ಅವರಿಗೆ ಕಾಲಲ್ಲಿ ಒದ್ದಿದ್ದಲ್ಲದೇ, ಇಟ್ಟಿಗೆಯಿಂದ ಮುಖಕ್ಕೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಗಿರಿನಗರ ಠಾಣಾಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಧರ್ಮನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.