ಬೆಂಗಳೂರು: ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ 25 ಬಾರಿ ಕೊಚ್ಚಿ ಹತ್ಯೆಗೈದ ಘಟನೆ ತಮಿಳುನಾಡಿನ ಸಿಪ್ಕಾಟ್ ಬಳಿಯ ಬೇಗಿಪಲ್ಲಿಯಲ್ಲಿ ನಡೆದಿದೆ.
ಬೇಗಿಪಲ್ಲಿಯ ನಿವಾಸಿ ತಿಮ್ಮರಾಜು (36) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಆತನನ್ನು ಮೂವರು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ 25 ಬಾರಿ ಚುಚ್ಚಿದ್ದಾರೆ. ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸಿಪ್ಕಾಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.