ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಿಎ ಎಂದು ಹೇಳಿಕೊಂಡು ಇಂಡಿಯಾ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಎಂಎಸ್ ಧೋನಿ ಅವರ ಮ್ಯಾನೇಜರ್ಗೆ ವಂಚಿಸಿದ ಘಟನೆ ನಡೆದಿದ್ದು, ಕಳೆದ ವರ್ಷ ಅಕ್ಟೋಬರ್ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ ದೇವರ ಸ್ಪೆಷಲ್ ದರ್ಶನ ಮಾಡಿಸಿಕೊಡುತ್ತೇನೆ ಎಂದು ಹೇಳಿ ವಂಚಕನೊಬ್ಬ ಲಕ್ಷಾಂತರ ರೂಪಾಯಿ ವಂಚಿಸಿದ್ದಾನೆ.
ಎಂಎಸ್ ಧೋನಿ ಅವರ ಮ್ಯಾನೇಜರ್ ಸ್ವಾಮಿನಾಥನ್ ಎಂಬವರಿಗೆ ಬರೋಬ್ಬರಿ ಆರುವರೆ ಲಕ್ಷ ರೂಪಾಯಿಗಳಷ್ಟು ವಂಚಿಸಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪಿಎ ತಾನು, ತಾನು ಐಎಎಸ್ ಅಧಿಕಾರಿಯಾಗಿದ್ದು, ತಿರುಪತಿಯಲ್ಲಿ ಹನ್ನೆರಡು ಮಂದಿಗೆ ದೇವರ ವಿಶೇಷ ದರ್ಶನ ಮಾಡಿಸುತ್ತೇವೆ, ರೂಮ್ ವ್ಯವಸ್ಥೆ ಇರುತ್ತದೆ. ಪ್ರೋಟೋಕಾಲ್ ಮೂಲಕ ಯಾರನ್ನಾದ್ರೂ ಕಳಿಸುವ ಅಧಿಕಾರ ತನಗಿದೆ ಎಂದು ಒಬ್ಬಾತ ವಂಚಿಸಿದ್ದಾನೆ.
ಸ್ನೇಹಿತರ ಕುಟುಂಬವನ್ನು ಕಳಿಸುವ ನಿಟ್ಟಿನಲ್ಲಿ ಮೂರು ಲಕ್ಷ ರೂಪಾಯಿ ಹಣವನ್ನು ಧೋನಿ ಅವರ ಮ್ಯಾನೇಜರ್ ಸ್ವಾಮಿನಾಥನ್ ಅವರು ಪೋನ್ ಪೇ ಮಾಡಿದ್ದರು. ಸಾಯಿ ಟ್ರಸ್ಟ್ ಹೆಸರಿಗೆ ಮೂರು ಲಕ್ಷ ಹಣ ಪಡೆದಿರುವ ಆರೋಪವಿದೆ. ಹಣ ಪಡೆದು ಹಿಂತಿರುಗಿಸದ ಹಿನ್ನೆಲೆಯಲ್ಲಿ ಸ್ವಾಮಿನಾಥನ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.