News Karnataka Kannada
Friday, May 10 2024
ಬೆಂಗಳೂರು

ಮನುಸ್ಮೃತಿ. ಅಂಬೇಡ್ಕರ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Cm Siddu
Photo Credit : News Kannada

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಅಂಬೇಡ್ಕರ್‌ ಮತ್ತು ಮನುಸ್ಮೃತಿಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾತಿ ಮತ್ತು ಲಿಂಗತಾರತಮ್ಯವನ್ನು ಸಾರುವ ಅಲಿಖಿತ ಸಂವಿಧಾನ ಮನುಸ್ಮೃತಿಯನ್ನು ಸುಟ್ಟುಹಾಕಿದ್ದರು.

ಇಂದು ನಾವೆಲ್ಲರೂ ನಮ್ಮೊಳಗೆ ಇನ್ನೂ ಉಳಿದಿರಬಹುದಾದ ಆ ಮನುಸ್ಮೃತಿಯ ಪಳೆಯುಳಿಕೆಗಳನ್ನು ಸುಟ್ಟು ಹಾಕಬೇಕು. ಆ ಅಲಿಖಿತ ಸಂವಿಧಾನದ ನಾಶವಾಗದೆ ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ ನೀಡಿರುವ ಲಿಖಿತ ಸಂವಿಧಾನದ ಸಂಪೂರ್ಣ ಅನುಷ್ಠಾನ ಅಸಾಧ್ಯ. ನಾಡಿನ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಧರ್ಮಗ್ರಂಥವಾಗಲಿ. ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಬದುಕುವ ಮೂಲಕ ಮನುವಾದವನ್ನು ಹಿಮ್ಮೆಟ್ಟಿಸೋಣ ಎಂದು ಟ್ವೀಟ್‌ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು