ಬೆಂಗಳೂರು: ನಾಳೆ ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ನಾನಾ ರೀತಿಯ ಸಿದ್ಧತೆಯನ್ನು ಅಭಿಮಾನಿಗಳು ಮಾಡಿಕೊಳ್ಳುತ್ತಿದ್ದಾರೆ.
ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲೇ ನಡೆಯಲಿದೆ.
ಇವುಗಳ ಜೊತೆಗೆ ರಾಜ್ಯಾದ್ಯಂತ ಡಾ.ರಾಜ್ ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನ್ನ ಸಂತರ್ಪನೆ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿದ್ದಾರೆ.