News Karnataka Kannada
Sunday, April 28 2024
ಬೆಂಗಳೂರು

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕ ಪುಡಿ ಮಾಡಿದ ಕಿಡಿಗೇಡಿಗಳು

ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.  ಈ ಬಗ್ಗೆ  ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
Photo Credit : News Kannada

ಬೆಂಗಳೂರು: ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ನಾಮಫಲಕವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.  ಈ ಬಗ್ಗೆ  ಅಕ್ಷಯ್ ಗಿರೀಶ್ ಅವರ ತಾಯಿ ಮೇಘನಾ ಗಿರೀಶ್​ ಅವರು ಟ್ವೀಟ್​ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಅಪಘಾತವೋ ಅಥವಾ ಕಿಡಿಗೇಡಿಗಳ ಕೃತ್ಯದ ಬಗ್ಗೆ ತನಿಖೆ ನಡೆಸಬೇಕಿದೆ. ಸೋಮವಾರ ಆರ್ಮಿ ಡೇ ಮತ್ತು ಸಂಕ್ರಾಂತಿ ಹಬ್ಬ ಇದೆ. ಆದರೆ ನಮಗೆ ನೋವಿನ ಸಂಗತಿ ಎಂದು ಹುತಾತ್ಮ ಯೋಧನ ತಾಯಿ ಎಕ್ಸ್​​ನಲ್ಲಿ ಪೋಸ್ಟ್ ಹಾಕಿದ್ದರೆ.

ನೆನಪಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುನದಹಳ್ಳಿ ರಸ್ತೆಗೆ 2020ರಲ್ಲಿ ಹುತಾತ್ಮ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿಡಲಾಗಿತ್ತು. ಮತ್ತು ಅಂದು ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರಿನ ನಾಮಫಲಕವನ್ನು ಕಾಂಗ್ರೆಸ್​ ಶಾಸಕ ಕೃಷ್ಣಭೈರೇಗೌಡ ಅವರು ಉದ್ಘಾಟಿಸಿದ್ದರು.

ಉಗ್ರಗಾಮಿಗಳ ಜೊತೆ ಹೋರಾಡಿ ವೀರಮರಣವನ್ನಪ್ಪಿದ ಯೋಧ 2016 ರ ನವೆಂಬರ್​ 29 ರಂದು ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ಹುತಾತ್ಮರಾದ ಏಳು ಯೋಧರ ಪೈಕಿ ಬೆಂಗಳೂರಿನ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್ ಸಹ ಒಬ್ಬರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು