ಬೆಂಗಳೂರು: ಅಂತರ್ಜಲ ಕುಸಿತ, ಮಳೆ ಬಾರದೆ ಇರುವ ಕಾರಣದಿಂದಾಗಿ ಏಳು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಬಿಸಿಲು 36% ದಾಟಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ದಾಖಲೆಯ ತಾಪಮಾನದಲ್ಲಿ ಉಷ್ನಾಂಶ ಏರಿಕೆಯಾಗಿದೆ.
ಏಳು ವರ್ಷಗಳ ಬಳಿಕ ನಿನ್ನೆ 37.9% ಸೆಲ್ಸಿಯಸ್ ದಾಖಲಾಗಿದೆ. ಇಂದು 36.56% ಸೆಲ್ಸಿಯಸ್ ದಾಖಲಾಗಿದೆ. ಸಾಮಾನ್ಯವಾಗಿ ಏಪ್ರಿಲ್ನಲ್ಲಿ ಈ ತಾಪಮಾನ ದಾಖಲಾಗುತ್ತಿತ್ತು. ಆದರೆ ಈಗ ಮಾರ್ಚ್ನಲ್ಲಿಯೇ ಬಿಸಿಲಿನ ತೀವ್ರತೆ ಬಹಳಷ್ಟು ಹೆಚ್ಚಾಗಿದೆ. ಮಳೆ ಕೊರತೆ ಮತ್ತು ಅಂತರ್ಜಲ ಕುಸಿತದಿಂದ ಈ ರೀತಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಹೊರತುಪಡಿಸಿದರೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ 35 ರಿಂದ 40% ಸೆಲ್ಸಿಯಸ್ ತಾಪಮಾನ ಹೆಚ್ಚಾಗುತ್ತಿದೆ. ಮೇ ಅಂತ್ಯದ ವರೆಗೂ ಇರಲಿದೆ. ಮೇ ವರೆಗೂ ಇದೇ ರೀತಿಯ ಬಿಸಿಲು ಇರಲಿದ್ದು, ಏಪ್ರಿಲ್ ಎರಡನೇ ವಾರದಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಹೆಚ್ಚಿನ ತಾಪಮಾನದಿಂದ ಆರೋಗ್ಯ ಸಮಸ್ಯೆ
ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ.