News Karnataka Kannada
Sunday, May 12 2024
ಬೆಂಗಳೂರು

ಮಯಾಂಕ್​ ಅಗರ್ವಾಲ್​ ಅಸ್ವಸ್ಥ ; ಐಸಿಯುನಲ್ಲಿ ಚಿಕಿತ್ಸೆ

New Project 2024 01 30t184658.280
Photo Credit : News Kannada

ಬೆಂಗಳೂರು:  ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಯಾಂಕ್ ಅವರನ್ನು ಕೂಡಲೇ ​ತ್ರಿಪುರಾದ ಅಗರ್ತಲಾ​ ಎಎಲ್​ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ಪ್ರಯಾಣ ಮಾಡುವಾಗ ಈ ಘಟನೆ ನಡೆದಿದೆ.

ತ್ರಿಪುರ ವಿರುದ್ಧ ರಣಜಿ ಪಂದ್ಯವನ್ನಾಡಿದ್ದ ಕರ್ನಾಟಕ ತಂಡ ತನ್ನ ಮುಂದಿನ ಪಂದ್ಯವನ್ನು ರೈಲ್ವೇಸ್ ವಿರುದ್ಧ ಗುಜರಾತ್​ನ ಸೂರತ್​ನಲ್ಲಿ ಆಡಬೇಕಿತ್ತು. ಉಭಯ ತಂಡಗಳ ಈ ಪಂದ್ಯ ಇದೇ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕಾಗಿ ಕರ್ನಾಟಕ ರಣಜಿ ತಂಡದ ಆಟಗಾರರು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ವಿಮಾನದಲ್ಲಿ  ಮಯಾಂಕ್ ನೀರು ಕುಡಿಯುತ್ತಿದ್ದಂತೆ ಅವರ ಗಂಟಲಿನಲ್ಲಿ ಉರಿಯ ಅನುಭವವಾಗಿದೆ. ಹಾಗೆಯೇ ಬಾಯಿ, ನಾಲಿಗೆ ಸುಟ್ಟಂತ ಅನುಭವವಾಗಿದೆ. ಹೀಗಾಗಿ ಮಯಾಂಕ್​ ಮಾತನಾಡಲು ಸಾಧ್ಯವಾಗದೆ ವಿಮಾನದಲ್ಲೇ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು