ಬೆಂಗಳೂರು: ಬಿಸಿಲಿನ ಧಗೆ ತಾಳಲಾರದೆ ಮಳೆರಾಯನ ಆಗಮನಕ್ಕೆ ಕಾಯುತ್ತಿರುವ ಜನತೆ ಇತ್ತ ದಿನ ದಿನಕ್ಕೆ ಬಿಸಿಲು ತಾಳಲಾರದೆ ಸಾವನಪ್ಪುತ್ತಿರುವ ಪ್ರಾಣಿ ಪಕ್ಷಿಗಳು. ಇಂತಹ ಸಮಯದಲ್ಲಿ ನಾಡಿನ ಜನೆತೆಗೆ ಹವಮಾನ ಇಲಾಖೆ ಗುಡ್ ನ್ಯೂಸ್ ನೀಡಿದೆ .
ನಾಳೆ ಯುಗಾದಿ ಹಬ್ಬದಂದು ವರುಣ ಆಗಮನ ಆಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.ಭಾರತೀಯ ಹವಾಮಾನ ಇಲಾಖೆ ತಮಿಳುನಾಡು, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇಂದು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಸೇರಿದಂತೆ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದರ ಜೊತೆಗೆ ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳು ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇನ್ನು, ಜಾರ್ಖಂಡ್, ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಮಧ್ಯಪ್ರದೇಶ, ಛತ್ತೀಸ್ಗಢ, ಉತ್ತರ ಪ್ರದೇಶ, ಕರಾವಳಿ ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ತೆಲಂಗಾಣ, ಅಸ್ಸಾಂ ಮತ್ತು ಮೇಘಾಲಯ ಸೇರಿದಂತೆ ಹಲವಾರು ಪ್ರದೇಶಗಳಿಗೆ ಏಪ್ರಿಲ್ 6 ರಿಂದ ಏಪ್ರಿಲ್ 12ರವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.