ಬೆಂಗಳೂರು: ಕೊಳಕು ಬೆಟ್ಟೆ ಅಂತ ಅವಮಾನಿಸಿ ಮೆಟ್ರೋದಲ್ಲಿ ಪ್ರಯಾಣ ಮಾಡಲು ಅವಕಾಶ ನೀಡದ ಮೆಟ್ರೋ ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ಹೌದು. . ಅತಿರೇಕದ ವರ್ತನೆ ತೋರಿದ್ದಾರೆ. ದೇಶದ ಬೆನ್ನೆಲುಬು ರೈತನಿಗೆ ಬೆಂಗಳೂರು ಮೆಟ್ರೋದಲ್ಲಿ ಅವಮಾನ ಆಗಿದೆ. ಬಟ್ಟೆ ಕ್ಲೀನ್ ಇಲ್ಲ ಎಂಬ ಕಾರಣಕ್ಕೆ ರೈತನನ್ನ ಮೆಟ್ರೋ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದಾರೆ.
ಮೆಟ್ರೋ ನಿಲ್ದಾಣದ ಒಳಗೆ ಬಿಟ್ಟುಕೊಳ್ಳದೇ ದುರಹಂಕಾರ ಮೆರೆದಿದ್ದಾರೆ. ಬಟ್ಟೆ ಕೊಳೆಯಿದೆ ಎಂದು ಬಡ ರೈತನ ಮೇಲೆ ಸಿಬ್ಬಂದಿಯ ದುರಹಂಕಾರದ ವರ್ತನೆ ಮೆರೆದಿದ್ದರು. ಇದು ಸಹ ಪ್ರಯಾಣಿಕನ ಮೊಬೈಲ್ನಲ್ಲಿ ಸೆರೆಯಾಗಿದೆ. ರೈತನನ್ನು ಒಳಗೆ ಬಿಡದ ಸಿಬ್ಬಂದಿ ವಿರುದ್ಧ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ಪ್ರಯಾಣಿಕರಿಗೆ ತೊಂದರೆ ಆಗುತ್ತೆ ಅಂತ ಒಳಗೆ ಬಿಡ್ತಿಲ್ಲ ಅಂತ ಪ್ರಯಾಣಿಕರಿಗೆ ಆಕ್ರೋಶ ಹೊರ ಹಾಕಿದ್ದಾರೆ. ಕೊನೆಗೆ ಸಿಬ್ಬಂದಿಗೆ ಕ್ಯಾರೇ ಮಾಡದೇ ಸಹ ಪ್ರಯಾಣಿಕರೇ ರೈತರನ್ನು ಕರೆದುಕೊಂಡು ಹೋಗಿದ್ದಾರೆ. ಸಿಬ್ಬಂದಿ ಅತಿರೇಕದ ವರ್ತನೆಯ ವಿಡಿಯೋ ಎಕ್ಸ್(ಟ್ವಿಟರ್)ನಲ್ಲಿ ಪೋಸ್ಟ್ ಮಾಡಲಾಗಿತ್ತು. ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಕುರಿತು ತನಿಖೆ ನಡೆಸಿ ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಈ ಮೂಲಕ ರೈತನನ್ನ ಅಪಮಾನ ಮಾಡಿದ್ದ ಮೆಟ್ರೋ ಸಿಬ್ಬಂದಿ ಸಸ್ಪೆಂಡ್ ಮಾಡಲಾಗಿದೆ.
Read More:
1.