ಬೆಂಗಳೂರು: ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ ಎಂದು ಅಯೋಧ್ಯೆಯ ರಾಮ ಮಂದಿರದ ಆಹ್ವಾನದ ಮಂತ್ರಾಕ್ಷತೆಯನ್ನು ಅನ್ನಭಾಗ್ಯ ಅಕ್ಕಿಯಲ್ಲೇ ಕೊಡುತ್ತಿದ್ದಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಜೋಶಿ, “ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು ಒಂದು ಸಂತೋಷವೇ. ಆದರೆ ಅವರು ಸಂತೋಷ ಪಡುತ್ತಿರುವ ಕಾರಣ ಮಾತ್ರ ವಿಚಿತ್ರ” ಎಂದರು.
ರಾಮನ ಅಕ್ಷತೆ ಕಾಳಿನ ಬಗ್ಗೆಯೂ ಸುಳ್ಳು ಹೇಳಿದ್ದಾರೆ. ಈ ಹಿಂದಿನಿಂದಲೂ ರಾಮನ ಬಗ್ಗೆ ಸುಳ್ಳು ಹೇಳಿಕೊಂಡೇ ಬರುತ್ತಿದ್ದಾರೆ. ರಾಮನೇ ಕಾಲ್ಪನಿಕ ಅಂತ ಹಿಂದೆ ಅಂದಿದ್ದರು. ಇವತ್ತು ಅವರು ಕೊಡಲಾರದ ಅಕ್ಕಿ ಮಂತ್ರಾಕ್ಷತೆ ಎಂದಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸುಳ್ಳು ಹೇಳಿಕೆ ಕೊಟ್ಟಿದ್ದಾರೆ ಎಂದರು.
“ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ. ಕೊಡಲಾರದ ಅಕ್ಕಿಯಲ್ಲಿ ಅಕ್ಷತೆ ಆಗುತ್ತಿದೆ ಎಂದು ಪ್ರಭು ರಾಮನ ಅಕ್ಷತಾ ವಿಷಯದಲ್ಲೂ ಸುಳ್ಳು ಹೇಳುವ ಪಾಪಿಗಳು ನೀವು” ಎಂದು ಡಿಕೆ ಶಿವಕುಮಾರ್ ವಿರುದ್ಧ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…