ಬೆಂಗಳೂರು: ಪ್ರೀತಿಸಿದ ತಪ್ಪಿಗೆ ಯುವಕನಿಗೆ ಪೆಟ್ರೋಲ್ ಹಾಕಿ ಯುವತಿ ಪೋಷಕರು ಬೆಂಕಿ ಹಚ್ಚಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಆರ್ ಆರ್ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್ ಮೇಲೆ ಅಟ್ಯಾಕ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ತನ್ನ ಸಂಬಂಧಿಕರ ಯುವತಿಯನ್ನು ಶಶಾಂಕ್ ಪ್ರೀತಿ ಮಾಡುತ್ತಿದ್ದ. ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಸೋಮವಾರದಂದು ಮೈಸೂರಿನಿಂದ ಬೆಂಗಳೂರಿಗೆ ಯುವತಿ ಬಂದಿದ್ದಳು. ಈ ವೇಳೆ ಯುವತಿಯನ್ನು ಶಶಾಂಕ್ ಮನೆಗೆ ಕರೆದೊಯ್ದಿದ್ದ. ಈ ವೇಳೆ ಯುವತಿಯ ಪೋಷಕರು ಶಶಾಂಕ್ ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು ಕರೆದೊಯ್ದುದಿದ್ದರು.
ಇದಾದ ಬಳಿಕ ಶಶಾಂಕನನ್ನು ಕಿಡ್ನಾಪ್ ಮಾಡಿ ಕೈ ಕಾಲು ಕಟ್ಟಿಹಾಕಿ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಆಗಿದ್ದಾರೆ. ಈ ಸಂಬಂಧ ಆರೋಪಿಗಳಾದ ಯುವತಿ ಪೋಷಕರು, ಮನು ಹಾಗೂ ತಂಡದ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.