News Karnataka Kannada
Monday, April 29 2024
ಬೆಂಗಳೂರು

ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಸಕ ಎನ್.ಎ ಹ್ಯಾರಿಸ್ ನೇಮಕ

ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್  ನೇಮಕಗೊಂಡಿದ್ದಾರೆ.
Photo Credit : News Kannada

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್  ನೇಮಕಗೊಂಡಿದ್ದಾರೆ.

ಒಟ್ಟು 36 ಶಾಸಕರಿಗೆ ವಿವಿಧ ನಿಗಮ-ಮಂಡಳಿಗಳಲ್ಲಿ ಸ್ಥಾನ ಸಿಕ್ಕಿದ್ದು ಬಿಡಿಎ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಬಿಡಿಎ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಈ ಬಗ್ಗೆ ಮಾತನಾಡಿದ ಹ್ಯಾರಿಸ್, ಜವಾಬ್ದಾರಿಯನ್ನ ನನಗೆ ವಹಿಸಿದ್ದಾರೆ. ಬೆಂಗಳೂರು ನಗರದ ಬಗ್ಗೆ ನನಗೆ ಗೊತ್ತಿದೆ. ಈಗಾಗಲೇ ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಟ್ರಾನ್ಸ್ಫರೆನ್ಸಿ ತರುವಲ್ಲಿ ಪ್ರಯತ್ನಿಸುತ್ತೇನೆ. ಬಿಡಿಎಯನ್ನ ಜನಸ್ನೇಹಿ ಮಾಡಲು ಯತ್ನಿಸುತ್ತೇನೆ. ಸಿಎಂ, ಡಿಸಿಎಂ, ಬಿಡಿಎ ಜನಸ್ನೇಹಿ ಮಾಡಿ ಎಂದಿದ್ದಾರೆ. ಹೊಸ ಲೇಔಟ್ ಬಗ್ಗೆಯೂ ಯೋಜನೆ ಇದೆ ಎಂದು ತಿಳಿಸಿದರು.

ಶಾಂತಿನಗರ ಅಭಿವೃದ್ಧಿಯಾಗಿಲ್ಲ ಈಗ ನಿಮ್ಮನ್ನ ಬಿಡಿಎ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಹ್ಯಾರಿಸ್, ರಾಜಕೀಯವಾಗಿ ಮಾತನಾಡಿದ್ರೆ ನಾನು ರಾಜಕೀಯ ಮಾತನಾಡ್ತೇನೆ. ಬೆಂಗಳೂರು‌ ಎಲ್ಲವೂ ಬಿಡಿಎ ನಲ್ಲಿ ಬರಲ್ಲ. ಎಲ್ಲರ ಸಲಹೆಯನ್ನ ತೆಗೆದುಕೊಂಡು ಕೆಲಸ ಮಾಡ್ತೇನೆ. ಬಿಡಿಎಯನ್ನ ಇನ್ನಷ್ಟು ಅಭಿವೃದ್ಧಿ ಮಾಡ್ತೇವೆ. ಸಂಪನ್ಮೂಲಗಳ‌ ಕ್ರೋಡಿಕರಣಕ್ಕೆ ಮುಂದಾಗ್ತೇವೆ ಎಂದರು.

ಬಿಡಿಎ ನೂತನ ಅಧ್ಯಕ್ಷರಾಗಿ ಎನ್.ಎ. ಹ್ಯಾರಿಸ್ ನೇಮಕಗೊಂಡ ಸಂಬಂಧ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು ಶುಭ ಕೋರಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಜಮೀರ್ ಅಹ್ಮದ್ ಕೂಡ ಕಚೇರಿಗೆ ಆಗಮಿಸಿ ಶುಭ ಕೋರಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು