ಬೆಂಗಳೂರು: ಚಂದ್ರಯಾನ-3 ಯಶಸ್ಸಿ ಆಗುತ್ತಿದ್ದಂತೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಪ್ರಧಾನಿ ಮೋದಿ ಬೆಳಗ್ಗೆ 6.07ಕ್ಕೆ HAL ಏರ್ಪೋರ್ಟ್ಗೆ ಬಂದಿಳಿದಿದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಮತ್ತು ಬೆಂಗಳೂರು ನಗರ ಡಿಸಿ ಕೆ.ಎ. ದಯಾನಂದ್ ಪ್ರಧಾನಿಗೆ ಸ್ವಾಗತಿಸಿದರು. ಜಾಲಹಳ್ಳಿ ಕ್ರಾಸ್ನಲ್ಲಿ ಚಂಡೆ ಮೇಳ, ವೀರಾಗಾಸೆ ದೊಳ್ಳುಕುಣಿತ ತಂಡ ಮೋದಿಯವರನ್ನು ಸ್ವಾಗತಿಸಿದೆ.