ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಯಾವ ಮಾಂತ್ರಿಕ ಪೆಟ್ಟಿಗೆ ಮೋದಿ ಬಳಿ ಇದೆ. ಇದಕ್ಕೆ ಉತ್ತರ ಕೊಡುತ್ತೀರಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, ಮೋದಿಯವರೆ, ಅಜಿತ್ ಪವಾರ್, ಮುಕುಲ್ ರಾಯ್, ನವೀನ್ ಜಿಂದಾಲ್, ತಪಸ್ ರಾಯ್, ಪೆಮಾ ಖಂಡ್ ಇವರ ಮೇಲೆಲ್ಲಾ ಭ್ರಷ್ಟಾಚಾರದ ಆರೋಪವಿದೆ. ಇವರೆಲ್ಲಾ ಈಗ ನಿಮ್ಮ ಸಂಬಂಧ ಬೆಳೆಸಿದ್ದಾರೆ. ಇಲ್ಲಿ ಕೆಲವರಿಗೆ ಉನ್ನತ ಹುದ್ದೆ ಸಿಕ್ಕಿದೆ. ನಿಮ್ಮ ಪಕ್ಷದ ಸಖ್ಯ ಬೆಳೆಸುವ ಮೊದಲು ಇವರೆನ್ನೆಲ್ಲಾ ಬಂಧಿಸಿ ಜೈಲಿಗಟ್ಟಲು ಗೆಜ್ಜೆ ಕಟ್ಟಿ ಕುಣಿಯುತ್ತಿದ್ದ ಸಿಬಿಐ, ಐಟಿ ಮತ್ತು ಇಡಿ ಈಗ ಶೋಚನೀಯವಾಗಿ ಸೋತು ತಣ್ಣಗೆ ಮಲಗಿವೆ ಎಂದು ಹೇಳಿದ್ದಾರೆ.

ಮೋದಿಯವರೆ, ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಮಹಾರಾಷ್ಟ್ರದ ನಾರಾಯಣ ರಾಣೆಯವರನ್ನು ಇಡಿ ಬಂಧಿಸುವ ಹಂತಕ್ಕೂ ಹೋಗಿತ್ತು. ಆದರೆ ರಾಣೆ ನಿಮ್ಮ ಪಕ್ಷ ಸೇರಿದರು ಜೊತೆಗೆ ಕೇಂದ್ರ ಮಂತ್ರಿಯೂ ಆದರು. ವಿಸ್ಮಯವೆಂದರೆ ರಾಣೆ ನಿಮ್ಮ ಪಕ್ಷ ಸೇರಿದ ತಕ್ಷಣವೇ ಈಡಿ ಅವರ ವಿರುದ್ಧದ ಕೇಸ್ ಫೈಲ್ ಮುಚ್ಚಿಟ್ಟು ತೆಪ್ಪಗಾಯಿತು.ನಾರದಾ ಚಿಟ್ ಫಂಡ್ ಹಗರಣ ಸಹಿತ ಹಲವು ಹಗರಣಗಳ ಆರೋಪಿಯಾಗಿರುವ ಸುವೇಂದು ಅಧಿಕಾರಿ ಟಿಎಂಸಿ ಮುಖಂಡರಾಗಿದ್ದರು. ತನಿಖಾ ಸಂಸ್ಥೆಗಳು ಅವರ ಬೆನ್ನು ಬೀಳುತ್ತಿದ್ದಂತೆ ನಿಮ್ಮ ಪಕ್ಷ ಸೇರಿದರು ಜೊತೆಗೆ ಪಶ್ಚಿಮ ಬಂಗಾಳದ ವಿಪಕ್ಷ ನಾಯಕರಾದರು. ಏನಿದರ ರಹಸ್ಯ ಮೋದಿಯವರೆ?’ ಎಂದರು.

 

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago