ಬೆಂಗಳೂರು: ನೈರುತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದೆ ಎಂದು ಹವಾಮಾನ ಇಲಾಖೆ ದೃಢಪಡಿಸಿದೆ. ಮುಂಗಾರು ಮಾರುತಗಳು ವಾಡಿಕೆಗಿಂತ ಒಂದು ವಾರ ತಡವಾಗಿ ಕೇರಳ ರಾಜ್ಯವನ್ನು ಪ್ರವೇಶಿಸಿದ್ದು, ಬಿಪೊರ್ಜಾಯ್ ಚಂಡಮಾರುತ ನೈರುತ್ಯ ಮುಂಗಾರಿನ ಮೇಲೆ ಪ್ರಭಾವಿ ಬೀರಿದೆ.
ಆದರೆ ಇದರ ಪ್ರಭಾವ ಸೌಮ್ಯವಾಗಿದೆ. ಅರಬ್ಬಿ ಸಮುದ್ರದ ದಕ್ಷಿಣ ಭಾಗ, ಲಕ್ಷದ್ವೀಪ ಸಂಪೂರ್ಣ ಪ್ರದೇಶ, ಕೇರಳದ ಬಹುತೇಕ ಜಾಗ, ಮುನ್ನಾರ್ ಕೊಲ್ಲಿ ಪ್ರದೇಶಗಳಲ್ಲಿ ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದೆ ಎಂದು ಇಲಾಖೆ ಹೇಳಿದೆ.