ಬೆಂಗಳೂರು: ಆಗಿನ ಕಾಲಕ್ಕೆ ಹೋಲಿಸಿದರೆ ಈಗಿನ ಬಹಳಷ್ಟು ಹೆಣ್ಣು ಮಕ್ಕಳು ಶಿಕ್ಷಿತರೆ. ತಮ್ಮ ತಮ್ಮ ಜೀವನವನ್ನು ಅವರೇ ರೂಪಿಸಿಕೊಳ್ಳುವ ಸಾಮರ್ಥ್ಯ ಅವರಿಗಿದೆ. ಆದರೆ ಮದುವೆ ನಂತರ ತಮ್ಮ ಮಕ್ಕಳ ಆರೈಕೆಯ ಕಾರಣ ಅವರು ದುಡಿಯಲು ಅರ್ಹರಿದ್ದರು ಮನೆ ಮತ್ತು ಮಕ್ಕಳ ಜವಾಬ್ದಾರಿ ಅವರನ್ನು ಕಟ್ಟು ಹಾಕಿದೆ. ಹೀಗಿರುವಾಗ ಕೆಲಸ ಬಿಟ್ಟು ದಿನ ಪೂರ್ತಿ ಮಕ್ಕಳನ್ನು ನೋಡಿಕೊಳ್ಳುವ ಹೆಂಡತಿಗೆ ಪತಿ ಜೀವನಾಂಶದಂತೆ ಪ್ರತಿ ತಿಂಗಳು ಸಂಬಳ ನೀಡಬೇಕು ಎಂದು ಕರ್ನಾಟಕ ಹೈ ಕೋರ್ಟ್ ತಿಳಿಸಿದೆ. ಮಾಸಿಕ 36,000 ರೂ. ಪಾವತಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಸೂಚಿಸಿದ್ದಾರೆ.
ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಪತ್ನಿಯನ್ನು ತನ್ನ ಉಪನ್ಯಾಸಕ ಹುದ್ದೆ ತೊರೆಯುವಂತೆ ಮಾಡಿದ ಪತಿಯ ವಾದ ವನ್ನು ತಳ್ಳಿಹಾಕಿದ ಕರ್ನಾಟಕ ಹೈಕೋರ್ಟ್ ನ್ನ ಪತ್ನಿಗೆ ಮಾಸಿಕ 36,000 ರೂ. ಜೀವನಾಂಶ ನೀಡುವಂತೆ ಸೂಚಿಸಿದೆ. ಕೆನರಾ ಬ್ಯಾಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಪತಿಗೆ ಮಾಸಿಕ 36,000 ರೂ. ಪಾವತಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಸೂಚಿಸಿದ್ದಾರೆ.
ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಪತ್ನಿಯನ್ನು ತನ್ನ ಉಪನ್ಯಾಸಕ ಹುದ್ದೆ ತೊರೆಯುವಂತೆ ಮಾಡಿದ ಪತಿಯ ವಾದ ವನ್ನು ತಳ್ಳಿಹಾಕಿದ ಕರ್ನಾಟಕ ಹೈಕೋರ್ಟ್ ನ್ನ ಪತ್ನಿಗೆ ಮಾಸಿಕ 36,000 ರೂ. ಜೀವನಾಂಶ ನೀಡುವಂತೆ ಸೂಚಿಸಿದೆ. ಕೆನರಾ ಬ್ಯಾಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಪತಿಗೆ ಮಾಸಿಕ 36,000 ರೂ. ಪಾವತಿಸುವಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಸೂಚಿಸಿದ್ದಾರೆ.
ಹೆಂಡತಿಯು ಸೋಮಾರಿಯಾಗಿದ್ದಾಳೆ. ಹೀಗಾಗಿ ಆಕೆ ಕೆಲಸಕ್ಕೆ ಹೋಗುತ್ತಿಲ್ಲ ಎಂಬ ಪತಿಯ ವಾದವನ್ನು ಉಲ್ಲೇಖಿಸಿದ ನ್ಯಾಯಾಲಯ, ಇದು ಅಸಂಬದ್ಧವಾಗಿದೆ. ಹೆಂಡತಿ ಅರ್ಹತೆ ಹೊಂದಿರುವುದರಿಂದ, ಯಾವುದೇ ಜೀವನಾಂಶವನ್ನು ಪಡೆಯಲು ಹೆಂಡತಿ ಅನರ್ಹ ಎಂದು ಹೇಳಲಾಗುವುದಿಲ್ಲ. ಪ್ರತಿ ಪ್ರಕರಣವನ್ನು ಅರ್ಹತೆಯ ಮೇಲೆ ಪರಿಗಣಿಸಬೇಕು. ಹೆಂಡತಿ, ಗೃಹಿಣಿ ಮತ್ತು ತಾಯಿಯಾಗಿ, ವಿಶ್ರಾಂತಿ ಇಲ್ಲದೆ ಗಡಿಯಾರದಂತೆ ಕೆಲಸ ಮಾಡುತ್ತಾಳೆ. ಅದರಲ್ಲೂ ಮಕ್ಕಳನ್ನು ನೋಡಿಕೊಳ್ಳುವುದು ಪೂರ್ಣ ಸಮಯದ ಕೆಲಸ ಎಂದು ನ್ಯಾಯಾಲಯ ಹೇಳಿದೆ.