News Karnataka Kannada
Tuesday, May 07 2024
ಬೆಂಗಳೂರು

ಮಗುವಿನ ಮೇಲೆ ಹಲ್ಲೆ ಪ್ರಕರಣ: ತಾಯಿ ಹಾಗೂ ಪ್ರಿಯಕರನ ಬಂಧನ

ಮಗು ಮೇಲೆ ತಾಯಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಶಾರಿನ್ ಹಾಗೂ ಪ್ರಿಯಕರ ದಿನೇಶ್‌ನನ್ನು ಗಿರಿನಗರ ಪೊಲೀಸರು ಬಂಧಿಸಿ ಎಫ್‌ಐಆರ್ ಹಾಕಿದ್ದಾರೆ.
Photo Credit : News Kannada

ಬೆಂಗಳೂರು: ಮಗು ಮೇಲೆ ತಾಯಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಶಾರಿನ್ ಹಾಗೂ ಪ್ರಿಯಕರ ದಿನೇಶ್‌ನನ್ನು ಗಿರಿನಗರ ಪೊಲೀಸರು ಬಂಧಿಸಿ ಎಫ್‌ಐಆರ್ ಹಾಕಿದ್ದಾರೆ.

ಚೈಲ್ಡ್ ವೆಲ್ ಫೇರ್ ಕಮಿಟಿ ಅಧಿಕಾರಿ ನಾಗರತ್ನ ನೀಡಿದ ದೂರಿನ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಇಬ್ಬರನ್ನ ಪೊಲೀಸರು ಜೈಲಿಗೆ ತಳ್ಳಿದ್ದಾರೆ.

ಶಾರಿನ್ ಗೆ ಶಂಕರ್​ ಎಂಬಾತನ ಜೊತೆಗೆ ವಿವಾಹವಾಗಿದ್ದು,ಆಕೆ ಗಂಡನ ಜೊತೆಗೆ ವಾಸಿಸುತ್ತಿರಲಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನ ಮನೆಯಲ್ಲೇ ಕೂಡಿಹಾಕಿ ಹೋಗುತ್ತಿದ್ದಳು.

ಬಾಯ್ ಫ್ರೆಂಡ್ ದಿನೇಶ್​ ಜೊತೆ ಸೇರಿ ತಾಯಿ ಶಾರಿನ್ ತನ್ನ 4 ವರ್ಷದ ಮಗುವಿನ ಮೇಲೆ ದಿನನಿತ್ಯ ಹಲ್ಲೆ ಮಾಡುತ್ತಾ ಬಂದಿದ್ದಳು. ತಾಯಿಯ ಹಲ್ಲೆಯಿಂದ ಮಗುವಿನ ದೇಹದ ಮೇಲೆಲ್ಲಾ ಗಾಯಗಳಾಗಿತ್ತು. ಅಷ್ಟು ಮಾತ್ರವಲ್ಲದೆ ತಾಯಿ ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಬಿಟ್ಟು ಬೀಗ ಹಾಕಿ ಹೋದರೆ, ರಾತ್ರಿ ಬರೋವರೆಗೂ ಕೂಡಿ ಹಾಕಿರೋದು ಬೆಳಕಿಗೆ ಬಂದಿತ್ತು.

ಇನ್ನು ಮಧ್ಯಾಹ್ನ ಮಗುವಿಗೆ ಊಟ ಕೊಡೋಕೆ ಅಂತಾ ಮಹಿಳೆಯ ಫ್ರೆಂಡ್ ಮನೆಗೆ ಬರುತ್ತಿದ್ದನಂತೆ. ಆದರೆ ಮಗುವಿನ ಮೈಮೇಲೆಲ್ಲಾ ಪೂರ್ತಿ ಗಾಯಗಳಾಗಿದ್ದು, ತಾಯಿ ಮತ್ತು ಅಂಕಲ್​ ನನಗೆ ಹಲ್ಲೆ ಮಾಡುವುದಾಗಿ ಮಗು ಹೇಳಿಕೊಂಡಿದೆ.

ಇನ್ನು ಈ ಘಟನೆ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗವೇಣಿ ಮಗುವಿನ ರಕ್ಷಣೆ ಮಾಡಿದ್ದಾರೆ. ಸದ್ಯ ಶಿಶು ಮಂದಿರದಲ್ಲಿ ಮಗುವಿನ ಪಾಲನೆ ಮಾಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು