ಬೆಂಗಳೂರು: ನನ್ನ ನಾಮಪತ್ರ ತಿರಸ್ಕೃತವಾಗಬೇಕೆಂದು ಸಿಎಂ ಕಚೇರಿ, ಬಿಜೆಪಿ ಕಾನೂನು ಘಟಕ ಷಡ್ಯಂತ್ರ ರೂಪಿಸಿದ್ದವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನನ್ನ ನಾಮಪತ್ರ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷದ ಹಲವು ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರವನ್ನು ಡೌನ್ಲೋಡ್ ಮಾಡಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಗಮನಹರಿಸಬೇಕು ಎಂದರು. ಮುಖ್ಯಮಂತ್ರಿ ಕಚೇರಿ ಮೂಲಕವೇ ನಾಮಪತ್ರ ಡೌನ್ಲೋಡ್ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಕಚೇರಿಯ ದೂರವಾಣಿ ಮಾಹಿತಿ ಪಡೆದುಕೊಂಡು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.