ಬೆಂಗಳೂರು: ಇನ್ಫೋಸಿಸ್ ಸ್ಥಾಪಕ ಎನ್ಆರ್ ನಾರಾಯಣ ಮೂರ್ತಿ ಅವರು ನಾಲ್ಕು ತಿಂಗಳು ಪ್ರಾಯದ ಮೊಮ್ಮಗ ಏಕಾಗ್ರಹ ರೋಹನ್ ಮೂರ್ತಿಗೆ 240 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರಿಂದ ಏಕಾಗ್ರಹ ರೋಹನ್ ಮೂರ್ತಿ ಭಾರತದ ಅತ್ಯಂತ ಕಿರಿಯ ಕೋಟ್ಯಧಿಪತಿ ಎಂಬ ಕೀರ್ತಿಗೆ ಪಾತ್ರನಾಗಿದ್ದಾನೆ.
ತನ್ನ ಮೊಮ್ಮಗ ಏಕಾಗ್ರಹ ರೋಹನ್ ಮೂರ್ತಿಗೆ ನಾರಾಯಣ ಮೂರ್ತಿ ಅವರು 240 ಕೋಟಿ ರೂಪಾಯಿ ಮೌಲ್ಯದ ಷೇರನ್ನು ಉಡುಗೊರೆ ನೀಡಿದ್ದಾರೆ. ಅಂದರೆ, ರೋಹನ್ ಮೂರ್ತಿಯ ಮಗು ಭಾರತದ ಎರಡನೇ ಬೃಹತ್ ಮಾಹಿತಿ ತಂತ್ರಜ್ಞಾನ ಸೇವಾ ಕಂಪನಿಯಲ್ಲಿ 15,00,000 ಷೇರುಗಳು ಅಥವಾ ಶೇಕಡ 0.04 ಷೇರುಗಳನ್ನು ತನ್ನದಾಗಿಸಿಕೊಂಡಿದೆ.
ಈ ಷೇರು ಉಡುಗೊರೆ ಬಳಿಕ ಇನ್ಫೋಸಿಸ್ನಲ್ಲಿ ನಾರಾಯಣ ಮೂರ್ತಿಯವರ ಷೇರಿನ ಪ್ರಮಾಣವು ಶೇಕಡ 0.40ರಿಂದ 0.36ಕ್ಕೆ ಇಳಿಕೆ ಕಂಡಿದೆ. ಈ ಷೇರು ವಹಿವಾಟನ್ನು “ಆಫ್ ಮಾರ್ಕೆಟ್” ವಿಭಾಗದಲ್ಲಿ ಮಾಡಲಾಗಿದೆ. ಕಳೆದ ನವೆಂಬರ್ ತಿಂಗಳಿನಲ್ಲಿ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿಯವರು ಅಜ್ಜ ಅಜ್ಜಿಯಾಗಿದ್ದರು. ಅಂದರೆ, ಅವರ ಪುತ್ರ ಸೊಸೆ ಅಪರ್ಣಾ ಕೃಷ್ಣನ್ ಗಂಡುಮಗುವಿಗೆ ಜನ್ಮ ನೀಡಿದ್ದರು. ಅಕ್ಷಯ್ ಮೂರ್ತಿಗೆ ಇಬ್ಬರು ಮಕ್ಕಳು ಜನಿಸಿದಾಗಲೇ ಇವರು ಅಜ್ಜ ಅಜ್ಜಿ ಆಗಿದ್ದರು. 1981ರಲ್ಲಿ ಇನ್ಫೊಸಿಸ್ ಕಂಪನಿಯು 250 ಡಾಲರ್ ಹೂಡಿಕೆಯೊಂದಿಗೆ ಆರಂಭವಾಗಿತ್ತು.
ನವೆಂಬರ್ನಲ್ಲಿ ನಾರಾಯಣ ಮೂರ್ತಿ ಮತ್ತು ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಅವರ ಮಗ ರೋಹನ್ ಮೂರ್ತಿ ಮತ್ತು ಪತ್ನಿ ಅಪರ್ಣಾ ಕೃಷ್ಣನ್ ಅವರಿಗೆ ಗಂಡು ಮಗು ಹುಟ್ಟಿತ್ತು. ಈ ಮೂಲಕ ಮೂರ್ತಿ ದಂಪತಿ ಮತ್ತೊಮ್ಮೆ ಅಜ್ಜ- ಅಜ್ಜಿಯಾಗಿದ್ದರು. ಏಕಾಗ್ರಹ್ ಮೂರ್ತಿ ದಂಪತಿಯ ಮೂರನೇ ಮೊಮ್ಮಗನಾಗಿದ್ದಾನೆ. ಈ ಹಿಂದೆ ರಿಷಿ ಸುನಾಕ್ ಹಾಗೂ ಅಕ್ಷತಾ ಮೂರ್ತಿಯ ಇಬ್ಬರು ಹೆಣ್ಣು ಮಕ್ಕಳ ಮೂಲಕವೂ ಅವರು ಅಜ್ಜಿ-ಅಜ್ಜಿಯಾಗಿದ್ದರು.
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…
ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…
ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…
ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…
ತಾಜ್ಮಹಲ್ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ ಸಂಬಂಧಿಸಿದಂತೆ ಎಚ್ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…