ಬೆಂಗಳೂರು: ಸಂವಿಧಾನದ ಅಡಿಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲಷ್ಟೇ ಅವಕಾಶವಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ಕೆರಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹನುಮ ಧ್ವಜ ಹಾರಿಸಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದನ್ನು ಹೊರತುಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ.
ಸ್ಥಳೀಯ ಯುವಕರು ಒಳ್ಳೆಯವರೇ, ಅವರನ್ನ ದಾರಿ ತಪ್ಪಿಸುತ್ತಿದ್ದಾರೆ. ಎಲ್ಲಾ ಯುವಕರ ಜೊತೆ ಮಾತನಾಡುತ್ತೇನೆ. ಖಾಸಗಿ ಜಾಗದಲ್ಲಿ ಅಥವಾ ದೇವಾಲಯದ ಮುಂದೆ ಹನುಮಾನ್ ಧ್ವಜ ಹಾರಿಸಲು ಅವಕಾಶ ಕೊಡೋಣ. ಆದರೆ ಸರ್ಕಾರಿ ಕಚೇರಿ ಮುಂದೆ ಬೇಡ ಎಂದು ಹೇಳಿದರು.
ತ್ರಿವರ್ಣ ಧ್ವಜಕ್ಕೆ ಅನುಮತಿ ಪಡೆದು ಬೇರೆ ಧ್ವಜ ಹಾರಿಸೋದು ತಪ್ಪು. ಸೋಮವಾರ ಬೆಳಗ್ಗೆ ಡಿಸಿ ಕಚೇರಿ ಮುಂದೆ ಹಾರಿಸುತ್ತೇನೆ ಎನ್ನುತ್ತಾರೆ. ಆಗ ಅವಕಾಶ ಕೊಡಲು ಆಗುತ್ತಾ? ಇದು ಒಂದು ಕಡೆ ಅವಕಾಶ ಕೊಟ್ಟರೆ ಎಲ್ಲಾ ಕಡೆ ಕೇಳುತ್ತಾರೆ. ಇದು ತಪ್ಪು ಎಂದರು.
ಸರ್ಕಾರಿ ಕಚೇರಿ ಮುಂದೆ ಹನುಮ ಧ್ವಜ ಹಾರಿಸಿರುವುದು ಸಂವಿಧಾನಕ್ಕೆ ವಿರುದ್ಧ ಆಗಿರುವುದರಿಂದ ಅದನ್ನು ತೆರವು ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…
ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…
ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.