ಬೆಂಗಳೂರು: ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿದೆ. ಅಮೃತ ಉತ್ಸವದ ಕಾರ್ಯಕ್ರಮವನ್ನ ಅರ್ಥಪೂರ್ಣವಾಗಿ ಆಚರಿಸಬೇಕೆಂದು ತೀರ್ಮಾನ ಮಾಡಿದ್ದೇವೆ.
ಫೆ.24ರಂದು ಉದ್ಘಾಟನೆ, ಫೆ.25ರಂದು ರ್ಯಾಲಿ ಮಾಡಲಾಗುವುದು ಭಾರತದ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಜನವರಿ 26ರಿಂದ 31 ಜಿಲ್ಲೆಗಳಲ್ಲೂ ಸಂವಿಧಾನ ಜಾಥಾ ಕಾರ್ಯಕ್ರಮ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಕೆಲಸ ಆಗ್ತಿದೆ ಎಂದರು.
31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 25ರಂದು ಕೊನೆಯಾಗುತ್ತೆ. ಫೆ.24, 25 ರಾಷ್ಟ್ರೀಯ ಐಕ್ಯತಾ ಸಮಾವೇಶ ಬೆಂಗಳೂರಿನಲ್ಲಿ ನಡೆಯುತ್ತೆ ಎಂದು ತಿಳಿಸಿದರು.
ಪ್ರೊ, ಅಶುತೋಷ್, ಪ್ರಶಾಂತ್ ಭೂಷಣ್, ಮೇದಾ ಪಾಟ್ಕರ್ ಸೇರಿದಂತೆ ಅನೇಕ ಮೇದಾವಿಗಳು ಭಾಗವಹಿಸ್ತಿದ್ದಾರೆ. ಜನರ ಭಾವನೆಗಳು, ಸಂವಿಧಾನದ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡ್ತಾರೆ. 24ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶ ಉದ್ಘಾಟನೆಯಾಗಲಿದೆ. 25ರಂದು ದೊಡ್ಡ ರ್ಯಾಲಿ ಮಾಡಲಾಗುತ್ತೆ.
ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಕೆಲಸ ಆಗ್ತಿದೆ. ಬಜೆಟ್ ಪುಸ್ತಕದ ಮೊದಲ ಮುಖ ಪುಟದಲ್ಲಿ ಪ್ರಿಯಾಂಬಲ್ ಉಲ್ಲೇಖಮಾಡಲಾಗಿದೆ. ಸಂವಿಧಾನ ಏನು ಕೊಟ್ಟಿದೆ ಅನ್ನೋದು ಜನರಿಗೆ ಗೊತ್ತಾಗಬೇಕು. ಅವರ ಹಕ್ಕುಗಳನ್ನು ಕೇಳಲಿಕ್ಕೆ ಹೋರಾಟ ಮಾಡುವುದಕ್ಕೆ, ಶಿಕ್ಷಣ ಸಂಘಟನೆ ಹೋರಾಟ ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಮೂರು ಅಸ್ತ್ರಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಭಾರತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಿರುವ ದೇಶ. ದೇಶದ ಜನತೆಗಾಗಿ ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ. ಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ. ಆದರೂ ಇಂದಿಗೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಬಡವರು, ದಲಿತರು, ಹಿಂದುಳಿದವರು ಅವಕಾಶ ವಂಚಿತರಾಗಿದ್ದಾರೆ. ಶಿಕ್ಷಣ ಪಡೆಯುವುದರಿಂದ ಮೂಢನಂಬಿಕೆಗಳು ನಿರ್ಮೂಲನೆ ಆಗಲಿದೆ. ಕೆಲವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಅಭಿಯಾನ ಆರಂಭ ಮಾಡಿದ್ದೇವೆ ಎಂದರು.
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…