ಬೆಂಗಳೂರು: ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಅನುಷ್ಠಾನವನ್ನು ರದ್ದು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು. ಆರ್ಎಸ್ಎಸ್ ಕಾರ್ಯತಂತ್ರದ ಭಾಗವಾಗಿರುವ ಇಎನ್ ಪಿ ರದ್ದು ಮಾಡಬೇಕೆಂದು ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ. ಆರ್. ರೆಹಮಾನ್ ಖಾನ್ ಒತ್ತಾಯಿಸಿದರು. ಇದಕ್ಕುತ್ತರಿಸಿದ ಸಿಎಂ ಮುಂದಿನ ವರ್ಷದಿಂದ ರಾಜ್ಯದಲ್ಲಿ ಇಎನ್ಇಪಿಯನ್ನು ಸಂಪೂರ್ಣವಾಗಿ ರದ್ದು ಮಾಡುತ್ತೇವೆ ಎಂದರು. ಅಲ್ಲದೆ ಸಂವಿಧಾನಕ್ಕೆ ಪೂರಕ ಅಂಶಗಳಿರುವ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದರು.
ನಾಗಪುರದ ಆರ್ಎಸ್ಎಸ್ ಕೇಂದ್ರ ಕಚೇರಿಯಲ್ಲಿ ಎನ್ ಇಪಿ ಕರಡು ತಯಾರಾಗಿತ್ತು. ಬಹಳ ವರ್ಷ ಹಿಂದೆಯೇ ಅದು ಸೋರಿಕೆಯಾಗಿತ್ತು ಎಂದು ಖಾನ್ ಹೇಳಿದರು.