ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ ಎನ್ಐಎ ದಾಳಿ ಮಾಡಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ವಿಚಾರವಾಗಿ ಬೆಂಗಳೂರಿನ 5 ಕಡೆ ಎನ್ಐಎ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. ಶಂಕಿತರ ಮನೆಗಳ ಮೇಲೆ ದಾಳಿ ಮಾಡಿರುವ ಎನ್ಐಎ ಮುಂಜಾನೆಯಿಂದಲೇ ಮನೆಗಳಲ್ಲಿ ಪರಿಶೀಲನೆ ಮಾಡಿದ್ದಾರೆ.
ಭಟ್ಕಳ ಪಟ್ಟಣದ ತಕಿಯಾ ಸ್ಟ್ರೀಟ್ನಲ್ಲಿರುವ ಶಂಕಿತ ಉಗ್ರ ಇಕ್ಬಾಲ್ ಭಟ್ಕಳ ಪುತ್ರ ಅಬ್ದುಲ್ ರಬಿ ಮನೆ ಮೇಲೆ ದಾಳಿ ಮಾಡಲಾಗಿದೆ.
ಬಾಂಬರ್ ವಯಸ್ಸು ಅಬ್ದುಲ್ ರಬಿಗೆ ಹೋಲಿಕೆಯಾಗುವ ಹಿನ್ನೆಲೆ ಸ್ಥಳೀಯ ಪೊಲೀಸರ ಸಹಕಾರದಿಂದ ಬೆಂಗಳೂರಿನ ಎನ್ಐಎ ತಂಡ ದಾಳಿ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ದಾಳಿ ಮಾಡಿ ಮಾಡಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ಮಾಡಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ಎನ್ಐಎ ದಾಳಿ, ಪರಿಶೀಲನೆ ಮಾಡಲಾಗಿದೆ.