News Karnataka Kannada
Saturday, April 27 2024
ಬೆಂಗಳೂರು

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ: ಭಟ್ಕಳದ ಶಂಕಿತನ ಮನೆ ಮೇಲೆ ಎನ್‌ಐಎ ದಾಳಿ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ ಎನ್‌ಐಎ ದಾಳಿ ಮಾಡಿದೆ.
Photo Credit : NewsKarnataka

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ ಎನ್‌ಐಎ ದಾಳಿ ಮಾಡಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ವಿಚಾರವಾಗಿ ಬೆಂಗಳೂರಿನ 5 ಕಡೆ ಎನ್​ಐಎ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. ಶಂಕಿತರ ಮನೆಗಳ ಮೇಲೆ ದಾಳಿ ಮಾಡಿರುವ ಎನ್​ಐಎ ಮುಂಜಾನೆಯಿಂದಲೇ ಮನೆಗಳಲ್ಲಿ ಪರಿಶೀಲನೆ ಮಾಡಿದ್ದಾರೆ.

ಭಟ್ಕಳ ಪಟ್ಟಣದ ತಕಿಯಾ ಸ್ಟ್ರೀಟ್‌ನಲ್ಲಿರುವ ಶಂಕಿತ ಉಗ್ರ ಇಕ್ಬಾಲ್‌ ಭಟ್ಕಳ ಪುತ್ರ ಅಬ್ದುಲ್ ರಬಿ ಮನೆ ಮೇಲೆ ದಾಳಿ ಮಾಡಲಾಗಿದೆ.

ಬಾಂಬರ್ ವಯಸ್ಸು ಅಬ್ದುಲ್ ರಬಿಗೆ ಹೋಲಿಕೆಯಾಗುವ ಹಿನ್ನೆಲೆ ಸ್ಥಳೀಯ ಪೊಲೀಸರ ಸಹಕಾರದಿಂದ ಬೆಂಗಳೂರಿನ ಎನ್‌ಐಎ ತಂಡ ದಾಳಿ ಮಾಡಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ದಾಳಿ ಮಾಡಿ ಮಾಡಿದ್ದು, ಶಂಕಿತರ ಮನೆಗಳಲ್ಲಿ ಪರಿಶೀಲನೆ ಮಾಡಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ಎನ್​ಐಎ ದಾಳಿ, ಪರಿಶೀಲನೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು