ಬೆಂಗಳೂರು: ರಾಜಾನುಕುಂಟೆ ಪೊಲೀಸ್ ಠಾಣೆಯ ಮಾವಳ್ಳಿ ಪುರದಲ್ಲಿ ಡ್ರಗ್ ಪೆಡ್ಲರ್ ಇರುವಿಕೆ ಕುರಿತು ಪರಿಶೀಲನೆಗೆ ತೆರಳಿದ್ದ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಡ್ರಗ್ ಪೆಡ್ಲರ್ ಇರುವಿಕೆ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕಿತ್ತು. ಈ ಸಂಬಂಧ ಪರಿಶೀಲನೆಗೆ ತೆರಳಿದಾಗ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿದ್ದಾರೆ.
ನಿನ್ನೆ ತಡರಾತ್ರಿ 12 ಗಂಟೆಯಲ್ಲಿ ಈ ಘಟನೆ ನಡೆದಿದೆ.
ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ. ಆರೋಪಿಗಳು ಕಾರಿನ ಗಾಜು ಒಡೆದಿ ಹಾಕಿದ್ದಾರೆ.