News Karnataka Kannada
Sunday, April 28 2024
ಬೆಂಗಳೂರು

ಬೆಡ್‌ ಇಲ್ಲ ಎಂದ ನಿಮ್ಹಾನ್ಸ್‌ ವೈದ್ಯರು: ಆಸ್ಪತ್ರೆ ಆವರಣದಲ್ಲಿಯೇ ಮಗು ಸಾವು

ಅನೈತಿಕ ಸಂಬಂಧಕ್ಕೆ ತನ್ನ ಮಗಳು ಅಡ್ಡಿಯಾಗಿದ್ದಾಳೆಂದು ತಿಳಿದು ತಾಯಿಯೋರ್ವಳು ತನ್ನ ಐದು ವರ್ಷದ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಧಾರವಾಡದ ಕಮಲಾಪುರದಲ್ಲಿ ನಡೆದಿದೆ.
Photo Credit : News Kannada

ಬೆಂಗಳೂರು: ತಲೆಗೆ ಗಾಯವಾಗಿದ್ದ ಮಗುವಿಗೆ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲ ಎಂದು ಚಿಕಿತ್ಸೆ ನಿರಾಕರಿಸಿದ ಘಟನೆ ನಡೆದಿದ್ದು, ಆಸ್ಪತ್ರೆ ಆಡಳಿತ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ.

ಚಿಕ್ಕಮಗಳೂರಿನ ಬಸವನಗುಡಿ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಮೃತ ಮಗುವಿಗೆ ತಲೆಗೆ ಪೆಟ್ಟಾಗಿದ್ದು, ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ ಗೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಅದರಂತೆ ಹಾಸನದಿಂದ ಬೆಂಗಳೂರಿನವರೆಗೆ 224 ಕಿಮೀ ‘ಗ್ರೀನ್ ಕಾರಿಡಾರ್’ ವ್ಯವಸ್ಥೆ ಮಾಡಲಾಗಿತ್ತು. ಆಂಬ್ಯುಲೆನ್ಸ್ ಚಾಲಕ ಹಾಸನದಿಂದ ಬೆಂಗಳೂರಿಗೆ 224 ಕಿಮೀ ದೂರವನ್ನು 1 ಗಂಟೆ 40 ನಿಮಿಷಗಳಲ್ಲಿ ಕ್ರಮಿಸಿ ನಿಮ್ಹಾನ್ಸ್ ತಲುಪಿದ್ದರು. ಅಲ್ಲದೆ ಹಾಸನದ ವೈದ್ಯರು ನಿಮ್ಹಾನ್ಸ್‌ನ ಆಡಳಿತ ಘಟಕಕ್ಕೆ ಕರೆ ಮಾಡಿ ಮಗುವಿನ ತುರ್ತು ಚಿಕಿತ್ಸಾ ಅಗತ್ಯಗಳ ಬಗ್ಗೆ ತಿಳಿಸಿದ್ದರು. ಆದರೆ, ನಿಮ್ಹಾನ್ಸ್ ಅಧಿಕಾರಿಗಳು ಬೆಡ್ ಇಲ್ಲ ಎಂದು ಪೋಷಕರಿಗೆ ತಿಳಿಸಿದ್ದಾರೆ. ಹಾಸಿಗೆ ಕೊಡಿಸಿ ಚಿಕಿತ್ಸೆ ಆರಂಭಿಸುವಂತೆ ಪೋಷಕರು ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಪೋಷಕರು ಆರೋಪಿಸಿದ್ದು, ಕೊನೆಗೆ ಮಗು ಆಸ್ಪತ್ರೆ ಆವರಣದಲ್ಲಿಯೇ ಸಾವನ್ನಪ್ಪಿದೆ.

ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಬಾಲಕನ ಸಾವಿಗೆ ಕಾರಣವಾದ ತುರ್ತು ಪರಿಸ್ಥಿತಿಯ ಬಗ್ಗೆ ನಿಮ್ಹಾನ್ಸ್ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಿಮ್ಹಾನ್ಸ್‌ನಲ್ಲಿ ದಟ್ಟಣೆ ಹೆಚ್ಚಿದೆ. ವೈದ್ಯರು ಒತ್ತಡದ ನಡುವೆಯೂ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದಾರೆ. ನಾನು ಮಗುವಿನ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು