ಬೆಂಗಳೂರು: ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ಕೋವಿಡ್ ನಿರ್ಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋವಿಡ್ ಮಾರ್ಗಸೂಚಿಯನ್ನು ತಿಳಿಸಿದ್ದಾರೆ.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. 60 ವರ್ಷ ಮೇಲ್ಪಟ್ಟ ವೃದ್ಧರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾನ್ಯ ಜನರು ಜನಸಂದಣಿಯ ಪ್ರದೇಶಗಳಲ್ಲಿ ಮಾತ್ರ ಮಾಸ್ಕ್ ಧರಿಸಬೇಕು
ಅಕ್ಸಿಜನ್ ಬೆಡ್ ವೆಂಟಿಲೇಶನ್ ಮುಂಚಿತವಾಗಿ ಎಲ್ಲಾ ತಯಾರಿ ಮಾಡಿಕೊಳ್ಳಲು ಹೇಳಿದ್ದೇವೆ. ಕೇಂದ್ರ ಕೊಡೋದಕ್ಕಿಂತ ಮುಂಚಯೇ ಲಸಿಕೆ ಖರೀದಿ ಮಾಡಲು ಸೂಚಿಸಲಾಗಿದೆ. ಆದರೆ, ಜನಸಂದಣಿಯಲ್ಲಿ ಮಾಸ್ಕ್ ಹಾಕಿಕೊಳ್ಳಿ ಎಂದು ರಾಜ್ಯದ ಜನತೆಗೆ ಮನವಿ ಮಾಡಲಾಗುತ್ತಿದೆ ಎಂದು ಹೇಳಿದರು.