News Karnataka Kannada
Wednesday, May 01 2024
ಬೆಂಗಳೂರು

ಆಸ್ತಿ ತೆರಿಗೆಯಲ್ಲಿ ಹೆಚ್ಚಳವಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ತುಷಾರ್‌ ಗಿರಿನಾಥ್‌

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್‌ 1ರಿಂದ ಯಾವುದೇ ಆಸ್ತಿ ತೆರಿಗೆ ಹೆಚ್ಚಳವಾಗುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಯ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಇಂತಹ ಸುದ್ದಿಗಳಿಗೆ ಯಾರು ಕೂಡ ಕಿವಿಗೊಡಬೇಡಿ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Photo Credit : NewsKarnataka

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್‌ 1ರಿಂದ ಯಾವುದೇ ಆಸ್ತಿ ತೆರಿಗೆ ಹೆಚ್ಚಳವಾಗುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಯ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಇಂತಹ ಸುದ್ದಿಗಳಿಗೆ ಯಾರು ಕೂಡ ಕಿವಿಗೊಡಬೇಡಿ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸುಳ್ಳು ಸುದ್ದಿ ಅಪ್‌ಲೋಡ್‌ ಮಾಡಿ ಜಾಲತಾಣದಲ್ಲಿ ಹರಿಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್‌ ಆಯುಕ್ತರನ್ನು ಕೋರಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ನೀಡಿರುವ ತುಷಾರ್‌ ಗಿರಿನಾಥ್‌, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂಬ ಸುದ್ದಿ ಬಿಬಿಎಂಪಿಯ ಗಮನಕ್ಕೆ ಬಂದಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ. ತೆರಿಗೆ ಹೆಚ್ಚಳ ಬಗ್ಗೆ ಆತಂಕ ಪಡುವ ಆಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹರಿದಾಡುದರ ಮೇಲೆ ಸಾರ್ವಜನಿಕರು ಜಾಗೃತರಾಗಿರಬೇಕು. ಪಾಲಿಕೆ ಆಸ್ತಿ ತೆರಿಗೆ ವಿಚಾರದಲ್ಲಿ ಸುಳ್ಳು ಸುದ್ದಿ ಹರಿಬಿಡುವವರ ಮೇಲೆ ನಿಯಮಾನುಸಾರ ಕಾನೂನು ಕ್ರಮ ವಹಿಸಲು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆಯಲಾಗಿದೆ.ನಾಗರೀಕರು ಇಂತಹ ಯಾವುದೇ ಸುಳ್ಳು ಸುದ್ದಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌  ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು