News Karnataka Kannada
Monday, April 29 2024
ಬೆಂಗಳೂರು

ಸಿಎಂ ಅನುಮತಿಯಿಲ್ಲದೆ ವರ್ಗಾವಣೆಯಿಲ್ಲ: ರಾಜ್ಯ ಸರ್ಕಾರ ಮಹತ್ವದ ಆದೇಶ

Cm Siddaramaiah celebrates decade of ksheera bhagya scheme
Photo Credit : News Kannada

ಬೆಂಗಳೂರು: ರಾಜ್ಯ ಸರ್ಕಾರ ಪ್ರಮುಖ ಕ್ರಮವೊಂದನ್ನು ಕೈಗೊಂಡಿದ್ದು ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡುವುದಾದರೆ ಮುಖ್ಯಮಂತ್ರಿಯವರ ಪೂರ್ವಾನುಮೋದನೆ ಪಡೆಯುವುದನ್ನು ಕಡ್ಡಾಯವಾಗಿದೆ.

ಒಂದು ವೇಳೆ ಮುಖ್ಯಮಂತ್ರಿಯವರ ಪೂರ್ವಾನುಮತಿ ಪಡೆಯದೆ ವರ್ಗಾವಣೆ ಮಾಡಿದ್ದು ಕಂಡುಬಂದಲ್ಲಿ ಸರಕಾರದ ಸಂಬಂಧಪಟ್ಟ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು. ಹಾಗೆಯೇ ಸಂಬಂಧಿಸಿದ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.

2023-24ರ ಸಾಲಿನಲ್ಲಿ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ, ಸಿಬಂದಿಯಲ್ಲಿ ಆಯಾ ಜೇಷ್ಠತಾ ಘಟಕದ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಮಾಡಲು ಜೂ. 1ರಿಂದ ಜು. 3ರ ವರೆಗೆ ಇಲಾಖಾ ಸಚಿವರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಅವಧಿ ಮುಕ್ತಾಯಗೊಂಡ ಬಳಿಕವೂ ಇಲಾಖಾ ಹಂತದಲ್ಲಿ ವರ್ಗಾವಣೆ ಕೈಗೊಂಡು ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡುತ್ತಿರುವ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು