ಬೆಂಗಳೂರು: ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ನಿನ್ನೆ ಪ್ರತಿಪಕ್ಷಗಳ ಸಭೆ ವೇಳೆ ವಿಧಾನಸಭೆ ಸ್ವೀಕರ್ ಯು.ಟಿ ಖಾದರ್ ಭೇಟಿ ನೀಡಿದ್ದನ್ನು ವಿರೋಧಿಸಿ ಅವರ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿವೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನೋಟಿಸ್ಗೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ
2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟನ್ನು ಎದುರಿಸುವ ನಿಟ್ಟಿನಲ್ಲಿ ಕಾರ್ಯತಂತ್ರದ ಕುರಿತು ಚರ್ಚಿಸಲು ದೆಹಲಿ ಮತ್ತು 10 ರಾಜ್ಯಗಳಲ್ಲಿ ವೈಯಕ್ತಿಕವಾಗಿ ಅಥವಾ ಮೈತ್ರಿಯಲ್ಲಿ ಅಧಿಕಾರದಲ್ಲಿರುವ 26 ವಿರೋಧ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆದಿದೆ. ಇದರಲ್ಲಿ ಯುಟಿ ಖಾದರ್ ಭಾಗಿಯಾಗಿದ್ದರು.