ಬೆಂಗಳೂರು: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾದಾಗಿನಿಂದ ಕರ್ನಾಟಕದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS-ನರೇಗಾ) ಅಡಿಯಲ್ಲಿ ಕೆಲಸ ಮಾಡುವವರ ಸಂಖ್ಯೆ ಶೇಕಡಾ 85 ರಷ್ಟು ಕುಸಿದಿದೆ.
ಚುನಾವಣೆ ದಿನಾಂಕ ಘೋಷಣೆಯಾದ ನಂತರ ಕರ್ನಾಟಕದ 5,963 ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಒಂದೇ ಒಂದು ಕೆಲಸವನ್ನು ಕೈಗೆತ್ತಿಕೊಂಡಿಲ್ಲ.
ಪ್ರಚಾರದ ಉದ್ದೇಶಕ್ಕಾಗಿ ಅಭ್ಯರ್ಥಿಗಳು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಕೃಷಿ ಮತ್ತು ಕಾರ್ಮಿಕರನ್ನು ಜೋಡಿಸುವುದರಿಂದ ನರೇಗಾದ ಅಡಿಯಲ್ಲಿ ಕೆಲಸ ಮಾಡುವವರ ಸಂಖ್ಯೆ ಕಡಿಮೆಯಾಗಿದೆ.
ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ರಾಜಕೀಯ ರ್ಯಾಲಿಗಳು ಮತ್ತು ಮನೆ-ಮನೆ ಪ್ರಚಾರದಲ್ಲಿ ಭಾಗವಹಿಸಿದರೆ ದುಪ್ಪಟ್ಟು ಹಣವನ್ನು ಪಡೆಯುತ್ತಾರೆ. ಜೊತೆಗೆ ಅವರಿಗೆ ಉಚಿತವಾಗಿ ಉಪಹಾರ ಮತ್ತು ಊಟವನ್ನು ಸಹ ನೀಡಲಾಗುತ್ತಿದ್ದು, ಈ ಕಾರಣಗಳಿಂದ ಕಾರ್ಮಿಕರು ಕೆಲಸಕ್ಕೆ ಹೋಗುತ್ತಿಲ್ಲ.
ದಿನದ ಪ್ರಚಾರದ ಕೊನೆಯಲ್ಲಿ ನಾವು ಹಣವನ್ನು ಪಡೆಯುತ್ತೇವೆ. ಚುನಾವಣೆ ಮುಗಿಯುವವರೆಗೂ ನರೇಗಾ ಕೆಲಸಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ದಾವಣಗೆರೆ ಜಿಲ್ಲೆಯ ತಣಿಗೇರಿಯ ಕೂಲಿ ಕಾರ್ಮಿಕ ಅಂಜನಪ್ಪ ಹೇಳಿದರು.
ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಚುನಾವಣೆ ನಡೆಯಲಿದೆ.