ಬೆಂಗಳೂರು: ಇತ್ತೀಚಿಗೆ ಬಟ್ಟೆ ಕೊಳಕಾಗಿದೆ ಎಂದು ವೃದ್ಧನೊಬ್ಬರನ್ನು ಬೆಂಗಳೂರು ನಗರದ ಮೆಟ್ರೋ ನಿಲ್ದಾಣದ ಒಳಗೆ ಬಿಡದೆ ಸಿಬ್ಬಂದಿಗಳು ತಡೆದು ಅಮಾನವೀಯವಾಗಿ ವರ್ತಿಸಿದ್ದರು. ಇದೀಗ ಮತ್ತೊಂದು ಅಂಥದ್ದೇ ಘಟನೆ ನಡೆದಿದ್ದು ಬಟ್ಟೆ ಸರಿ ಇಲ್ಲವೆಂದು ಮೆಟ್ರೋ ಕಾರ್ಮಿಕರನ್ನು ಸಿಬ್ಬಂದಿಗಳು ತಡೆದಿರುವ ಘಟನೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ನಮ್ಮ ಮೆಟ್ರೋ ಸಿಬ್ಬಂದಿಯ ಕ್ರಮದ ವಿರುದ್ಧ ಎಕ್ಸ್ ನಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಸಂಸದ ತೇಜಸ್ವಿ ಸೂರ್ಯ ಅವರನ್ನು ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಶರ್ಟ್ ಬಟನ್ ಮತ್ತು ನೀಟ್ ಆಗದಿದ್ದರೆ ಎಂಟ್ರಿ ಕೊಡುವುದಿಲ್ಲ ಎಂದು ಮೆಟ್ರೋ ಸಿಬ್ಬಂದಿ ಜೋರಾಗಿ ಗದರಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.ಇದೀಗ ಈ ವಿಡಿಯೋ ಟ್ವೀಟ್ ನಲ್ಲಿ ಭಾರಿ ವೈರಲ್ ಆಗಿದ್ದು ಮೆಟ್ರೋ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
Location Doddakallasandra metro. One more incident of cloth/attire related incident happened in front of me just now. A labourer was stopped & told to stitch up his top two buttons…
When did Namma metro became like this!!? @OfficialBMRCL @Tejasvi_Surya pic.twitter.com/4hB8Z6Q2gT
— Old_Saffron(ಮೋದಿಯ ಪರಿವಾರ/Modi’s Family) (@TotagiR) April 7, 2024