ಬೆಂಗಳೂರು: ಜುಲೈ 17, 18ರಂದು ಬೆಂಗಳೂರಿನಲ್ಲಿ ಮಹಾ ಮೈತ್ರಿಕೂಟದ ಸಭೆ ಏರ್ಪಡಿಸಿದ್ದು, ಮಹಾ ಮೈತ್ರಿಕೂಟದ ಸಭೆಗೆ ಖಾಸಗಿ ಹೋಟೆಲ್ನಲ್ಲಿ ಭರದ ಸಿದ್ಧತೆ ನಡೆದಿದೆ. ರೇಸ್ ಕೋರ್ಸ್ನ ಕುಮಾರಕೃಪ ರಸ್ತೆಯಲ್ಲಿ ಬೃಹತ್ ಫ್ಲೆಕ್ಸ್ ಬ್ಯಾನರ್ ಅಳವಡಿಕೆ ಮಾಡಲಾಗುತ್ತಿದ್ದು, ರಸ್ತೆಯ ಎಡಭಾಗದಲ್ಲಿ ವಿರೋಧ ಪಕ್ಷದ ನಾಯಕರುಗಳ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ.
ಎಂಕೆ ಸ್ಟ್ಯಾಲಿನ್, ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ನಿತೀಶ್ ಕುಮಾರ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೇರಳ ಕಾಂಗ್ರೆಸ್ ನ ಪ್ರಮುಖರು, ಉದ್ದವ ಠಾಕ್ರೆ ಸೇರಿದಂತೆ ಪ್ರಮುಖರ ಫ್ಲೆಕ್ಸ್ ಬ್ಯಾನರ್ ಅಳವಡಿಸಿ, ಎಐಸಿಸಿ ನಾಯಕರಿಂದ ಸಿದ್ದತೆಗಳ ಪರಿಶೀಲನೆ ಮಾಡಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಹಾ ಒಗ್ಗಟ್ಟಿಗೆ ಪ್ರತಿಪಕ್ಷಗಳು ಒಂದಾಗುತ್ತಿದ್ದು, ಮಹಾಘಟಬಂಧನ್ ಮಿತ್ರ ಪಕ್ಷಗಳ ಸಭೆಗೆ ಆಗಮಿಸಲಿರುವ ಮುಖಂಡರ ವಸತಿ ಮತ್ತು ಔತಣ ಕೂಟಗಳ ಪರಿಶೀಲನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸೇರಿದಂತೆ ಹಲವಾರು ನಾಯಕರು ಶನಿವಾರ ರಾತ್ರಿಯೇ ಪರಿಶೀಲನೆ ನಡೆಸಿದರು.
ಕಾಂಗ್ರೆಸ್ ವರಿಷ್ಟರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜುಲೈ 18 ರಂದು ನಡೆಯಲಿರುವ ಸಭೆಗೆ ಹಾಜರಾಗಲಿದ್ದಾರೆ. ಆಮ್ ಆದ್ಮಿ ಪಕ್ಷವೂ ಸೇರಿದಂತೆ 24 ಪಕ್ಷಗಳಿಗೆ ಈ ಸಭೆಯಲ್ಲಿ ಭಾಗಿಯಾಗಲು ಆಹ್ವಾನಿಸಲಾಗಿದೆ.
https://twitter.com/siddaramaiah