ಬೆಂಗಳೂರು: ರಾಜ್ಯದಲ್ಲಿ ದಿನಕ್ಕೊಬ್ಬರಂತೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆ ಬಗ್ಗೆ ಗಮನಹರಿಸುವ ಬದಲು ಕೇವಲ ಅಧಿಕಾರಕ್ಕಾಗಿ ಮಹಾಘಟಬಂಧನ್ ಸಭೆ ನಡೆಸುತ್ತಿದ್ದಾರೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಹಾಘಟಬಂಧನ್ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ. ಜೆಡಿಎಸ್ ಮುಳುಗಿಹೋಗಿದೆ ಎಂಬ ಭ್ರಮೆಯಲ್ಲಿ ಮಹಾಘಟಬಂಧನ್ ಇದೆ. ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟರೂ ಕೊಡದಿದ್ದರೂ ತಲೆಕೆಡಿಸಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಇದೇ ವೇಳೆ ಎನ್ಡಿಎ ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ. ಮುಂದೆ ನೋಡೋಣ. ನನ್ನ ಪಕ್ಷ ಸಂಘಟನೆ ಏನಿದೆ, ನಾಡಿನ ಸಮಸ್ಯೆ ಏನಿದೆ ಅದನ್ನ ನೋಡುತ್ತಿದ್ದೇನೆ ಎಂದರು.