ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಾದ ಮಕ್ಕಳನ್ನು ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಪೋಷಕರು ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.
ಇತ್ತೀಚೆಗೆ ನಡೆದ ಎಸ್ಎಸ್ಎಲ್ಸಿ ಎಕ್ಸಾಂ ದಿನ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದೆ. ಬ್ಯಾಗ್ ಇಡುವ ವಿಚಾರಕ್ಕೆ ಸಾರಕ್ಕಿ ಮತ್ತು ರಾಗಿಗುಡ್ಡ ವಿದ್ಯಾರ್ಥಿಗಳ ನಡುವೆ ಬಡಿದಾಟ ಶುರುವಾಗಿದೆ ಎನ್ನಲಾಗಿದೆ. ಈ ಗಲಾಟೆಯಲ್ಲಿ ಸಾರಕ್ಕಿ ಸ್ಕೂಲ್ನ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ತಲೆಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣ ಸಂಬಂಧ ರಾಗಿಗುಡ್ಡ ಸ್ಕೂಲ್ನ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ಬಾಲಮಂದಿರಕ್ಕೆ ಕಳುಹಿಸಿದ್ದಾರೆ.
ಆದರೆ ಪೋಷಕರು ನಮ್ಮ ಮಕ್ಕಳಿಗೆ ಗಲಾಟೆಯಾಗಿರುವ ವಿಚಾರವೇ ಗೊತ್ತಿಲ್ಲ. ಎಕ್ಸಾಂ ಬರೆಯೋಕೆ ಹೋದವರನ್ನ ಅರೆಸ್ಟ್ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಅಮಾಯಕ ಮಕ್ಕಳನ್ನು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿದ ಮೇಲೂ ಸರಿಯಾಗಿ ಮಾಹಿತಿಯನ್ನು ಕೊಟ್ಟಿಲ್ಲ. ಮಕ್ಕಳ ಆಧಾರ್ ಕಾರ್ಡ್ ತಗೊಂಡು ಸ್ಟೇಷನ್ ಬನ್ನಿ ಎಂದಿದ್ದರು ಎಂದು ಆರೋಪಿಸಿದ್ದಾರೆ.
ಘಟನೆ ನಡೆದು 1 ಗಂಟೆ ಕಳೆದ ಮೇಲೆ ಜೆಪಿ ನಗರ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ ಎನ್ನಲಾಗಿದೆ. ರಾಗಿ ಗುಡ್ಡ ಶಾಲಾ ಮಕ್ಕಳದ್ದು ಬ್ಲೂ ಕಲರ್ ಯೂನಿಫಾರ್ಮ್. ಇದೇ ಬ್ಲೂ ಯೂನಿಫಾರ್ಮ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತಹ ಯಾವುದೇ ದೃಶ್ಯ, ಸಾಕ್ಷಿ ಪೊಲೀಸರ ಬಳಿ ಇಲ್ಲ. ಸಿ.ಸಿ ಟಿವಿ / ಗಲಾಟೆಯ ವಿಡಿಯೋ ಪೊಲೀಸರ ಬಳಿ ಇಲ್ಲ. ರಾಗಿ ಗುಡ್ಡ ಸ್ಕೂಲ್ ಮಕ್ಕಳ ಯೂನಿಫಾರ್ಮ್ ಬ್ಲೂ ಕಲರ್. ಬ್ಲೂ ಯೂನಿಫಾರ್ಮ್ ಹಾಕಿದ್ದ ವಿದ್ಯಾರ್ಥಿಗಳನ್ನ ಅರೆಸ್ಟ್ ಮಾಡಿದ್ದಾರೆ ಎಂಬ ಆರೋಪ ಕೂಡ ಇದೆ.
ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…