ಬೆಂಗಳೂರು: ಅದು ಸಾಮಾನ್ಯ ಪೆನ್ಡ್ರೈವ್ ಅಲ್ಲ. ಈ ಪೆನ್ಡ್ರೈವ್ ರಿಲೀಸ್ಗೆ ನನಗೆ ಆತುರ ಇಲ್ಲ. ಪೆನ್ಡ್ರೈವ್ ಬಿಡುಗಡೆಯನ್ನು ಕಾಂಗ್ರೆಸ್ನವರೇ ತಡೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸ್ಫೀಕರ್ ಖಾದರ್ ಅವರಿಗೆ ಕೃಷಿ ಇಲಾಖೆಯ ವರ್ಗಾವಣೆಗೆ ನಿಗದಿ ಮಾಡಿದ ದರಪಟ್ಟಿ ಮತ್ತು ಪೆನ್ ಡ್ರೈವ್ ವಿಚಾರದ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇನ್ನೂ ತುಂಬಾ ವಿಚಾರ ಸಿಗಲಿದೆ. ಈಗಲೇ ಆತುರಪಡಬೇಡಿ. ಕಾಂಗ್ರೆಸ್ನಲ್ಲಿ ವಿಕೆಟ್ ಬೀಳಬೇಕು ಎಂದು ಕೆಲವರು ಕಾಯುತ್ತಿದ್ದಾರೆ.
ವರ್ಗಾವಣೆ ದಂಧೆಗೆ ಅಡ್ಡಗಳನ್ನು ಮಾಡಿಕೊಂಡಿದ್ದಾರೆ. ಈ ದರಪಟ್ಟಿ ಅವರೇ ಕೊಟ್ಟಿದ್ದ ಜಾಹೀರಾತಿನ ಮುಂದುವರೆದ ಭಾಗ ಇರಬಹುದು. ವಾಸ್ತವಾಂಶವನ್ನು ಸದನದ ಮುಂದೆ ಇಟ್ಟಿದ್ದೇನೆ. ಭ್ರಷ್ಟಾಚಾರ ನಿಲ್ಲಿಸುವ ಧೈರ್ಯವಿದ್ದರೆ ಕ್ರಮ ಕೈಗೊಳ್ಳಲಿ. ಈ ದರಪಟ್ಟಿ ಈಗ ಇವರ ಅವಧಿಯಲ್ಲೇ ಮಾಡಿದ್ದಾರೆ. ಅಧಿಕಾರಿಗಳಿಂದಲೇ ಈ ಮಾಹಿತಿ ಸೋರಿಕೆ ಆಗಿದೆ. ನಾನು ಎಲ್ಲೂ ಕದ್ದು ಓಡಿ ಹೋಗುವುದಿಲ್ಲ. ಹಿಟ್ ಆ್ಯಂಡ್ ರನ್ ಪ್ರಶ್ನೆಯೇ ಇಲ್ಲ. ಈ ಹಿಂದೆ 2008-2013ರ ಅವಧಿಯಲ್ಲಿನ ಹಗರಣಗಳ ಬಗ್ಗೆ ನಾನು ದಾಖಲೆ ಇಟ್ಟು ಮಾಡಿದ್ದೇನೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.